Kundapra.com ಕುಂದಾಪ್ರ ಡಾಟ್ ಕಾಂ

ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ ಬನ್ನಾಡಿ ಸೋಮನಾಥ ಹೆಗ್ಡೆ ನೇಮಕ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಲಯನ್ಸ್ ಜಿಲ್ಲೆ 317ಸಿ, ಪ್ರಾಂತ್ಯ V ರ ಪ್ರಾಂತೀಯ ಅಧ್ಯಕ್ಷರಾಗಿ, ಕುಂದಾಪುರ ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ ಅವರನ್ನು ಲಯನ್ಸ್ ಜಿಲ್ಲಾ ಗವರ್ನರ್ ಮಹಮ್ಮದ್ ಹನೀಫ್ ನಿಯುಕ್ತಿಗೊಳಿಸಿದ್ದಾರೆ.

ಪ್ರಾಂತೀಯ ಕಾರ್ಯದರ್ಶಿಯಾಗಿ ನ್ಯೂ ಇಂಡಿಯಾ ಇನ್ಶೂರೆನ್ಸ್ ಕಂಪನಿಯ ನಿವೃತ್ತ ಮ್ಯಾನೇಜರ್ ಹಾಗೂ ಬ್ರಹ್ಮಾವರ ಲಯನ್ಸ್ ಕ್ಲಬ್‍ನ ಆನಂದ ಶೆಟ್ಟಿ ಕಬ್ಬೈಲ್ ಇವರನ್ನು ನೇಮಿಸಲಾಗಿದೆ.

ಪ್ರಾಂತ್ಯ V, ವಲಯ I ರ ವಲಯಾಧ್ಯಕ್ಷರನ್ನಾಗಿ ತೆಕ್ಕಟ್ಟೆ ಲಯನ್ಸ್ ಕ್ಲಬ್‍ನ ಧರ್ಮರಾಜ್ ಮುದಲಿಯಾರ್ ಮತ್ತು ವಲಯ ಕಾರ್ಯದರ್ಶಿಯಾಗಿ ಅರುಣ್ ಕುಮಾರ್ ಶೆಟ್ಟಿ, ವಲಯ II ರ ವಲಯಾಧ್ಯಕ್ಷರನ್ನಾಗಿ ಹಂಗಳೂರು ಲಯನ್ಸ್ ಕ್ಲಬ್‍ನ ಬಾಲಕೃಷ್ಣ ಶೆಟ್ಟಿ ಮತ್ತು ವಲಯ ಕಾರ್ಯದರ್ಶಿಯಾಗಿ ವಿಲ್‍ಫ್ರೆಡ್ ಮೆನೆಜಸ್ ಹಾಗೂ ವಲಯ III ರ ವಲಯಾಧ್ಯಕ್ಷರನ್ನಾಗಿ ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್‍ನ ಬೆಳ್ವೆ ವಂಸತ್ ಶೆಟ್ಟಿ ಮತ್ತು ವಲಯ ಕಾರ್ಯದರ್ಶಿಯಾಗಿ ಪಟ್ಟಾಭಿರಾಮ್ ಭಟ್ ಇವರನ್ನು ನೇಮಿಸಲಾಗಿದೆ.

ಲಯನ್ಸ್ ಕ್ಲಬ್ ತೆಕ್ಕಟ್ಟೆ, ಲಯನ್ಸ್ ಕ್ಲಬ್ ಬನ್ನಾಡಿ- ವಡ್ಡರ್ಸೆ, ಲಯನ್ಸ್ ಕ್ಲಬ್ ಬ್ರಹ್ಮಾವರ-ಬಾರ್ಕೂರು, ಲಯನ್ಸ್ ಕ್ಲಬ್ ಕೋಟ-ಗಿಳಿಯಾರು ಪ್ರಾಂತ್ಯ V ವಲಯ I ರ ವ್ಯಾಪ್ತಿಗೆ, ಲಯನ್ಸ್ ಕ್ಲಬ್ ಹಂಗಳೂರು, ಲಯನ್ಸ್ ಕ್ಲಬ್ ಕೋಟೇಶ್ವರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್, ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರ ಪ್ರಾಂತ್ಯ V, ವಲಯ II ರ ವ್ಯಾಪ್ತಿಗೆ ಹಾಗೂ ಲಯನ್ಸ್ ಕ್ಲಬ್ ಆರ್ಡಿ-ಬೆಳ್ವೆ-ಗೋಳಿಯಂಗಡಿ, ಲಯನ್ಸ್ ಕ್ಲಬ್ ಮೊಳಹಳ್ಳಿ ಶಿವಶಾಂತಿ, ಲಯನ್ಸ್ ಕ್ಲಬ್ ಹಾಲಾಡಿ-ಬಿದ್ಕಲ್‍ಕಟ್ಟೆ, ಲಯನ್ಸ್ ಕ್ಲಬ್ ಕೊರ್ಗಿ-ಕಾಳವಾರ ಪ್ರಾಂತ್ಯ V ವಲಯ III ರ ವ್ಯಾಪ್ತಿಗೆ ಸೇರಿದ್ದು, ಒಟ್ಟು 12 ಲಯನ್ಸ್ ಕ್ಲಬ್‍ಗಳು ಪ್ರಾಂತ್ಯ V ರ ವ್ಯಾಪ್ತಿಗೆ ಒಳಪಟ್ಟಿವೆ.

Exit mobile version