Kundapra.com ಕುಂದಾಪ್ರ ಡಾಟ್ ಕಾಂ

ಡಾ. ರಮೇಶ್ ಅರವಿಂದ್ ಪ್ರಾಯೋಜಿತ ದತ್ತಿ ಪುರಸ್ಕಾರಕ್ಕೆ ಪೃಥ್ವೀಶ್ ಕೆ, ರವೀಂದ್ರ ಶೆಟ್ಟಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ರಿ. ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಚಿತ್ರನಟ ಡಾ. ರಮೇಶ್ ಅರವಿಂದ್ ಪ್ರಾಯೋಜಿತ ಉದಯೋನ್ಮುಖ ಸಾಧಕರಿಕೆ ನೀಡುವ ದತ್ತಿ ಪುರಸ್ಕಾರಕ್ಕೆ ಇಬ್ಬರು ಸಾಧಕರು ಆಯ್ಕೆ ಆಗಿದ್ದಾರೆ.

ರೂಬಿಕ್ ಕ್ಯುಬ್ ಗಿನ್ನಿಸ್ ದಾಖಲೆಗಾರ ನಾವೀನ್ಯ ರೂಪಕ ಪ್ರತೀಕ ಪೃಥ್ವೀಶ್ ಕೆ. ಚೇರ್ಕಾಡಿ ಹಾಗೂ ಕಿರುಚಿತ್ರಗಳ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆ-ಸಂಭಾಷಣೆಗಾರ, ಸಾಹಿತಿ ರವೀಂದ್ರ ಶೆಟ್ಟಿ ತಂತ್ರಾಡಿ ಅವರನ್ನು ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜುಲೈ 21 ರಂದು ಸಂಜೆ 5 ಗಂಟೆಗೆ ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಸಲಾಗುವುದೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ. ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version