Kundapra.com ಕುಂದಾಪ್ರ ಡಾಟ್ ಕಾಂ

ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರ ತೃತೀಯ ಪುಣ್ಯತಿಥಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರ ತೃತೀಯ ಪುಣ್ಯತಿಥಿ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು.

ಪುರೋಹಿತರಾದ ಜಿ. ವಿಠಲದಾಸ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿ ಗುರು ಗುಣಗಾನ ಮಾಡಿದರು. ಗಂಗೊಳ್ಳಿಯ ಜಿಎಸ್‌ಬಿ ಸಮಾಜದ ಹತ್ತು ಸಮಸ್ತರು ಹಾಗೂ ಜಿ. ಕೃಷ್ಣಾನಂದ ಆಚಾರ್ಯ ಸ್ಮರಣಾರ್ಥ ಮಕ್ಕಳು ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರ ತೃತೀಯ ಪುಣ್ಯತಿಥಿ ಕಾರ್ಯಕ್ರಮ ಸೇವೆಯನ್ನು ಸಮರ್ಪಿಸಿದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಎನ್. ಸದಾಶಿವ ನಾಯಕ್, ಆಡಳಿತ ಮಂಡಳಿ ಸದಸ್ಯರಾದ ಜಿ. ವೇದವ್ಯಾಸ ಕೆ. ಆಚಾರ್ಯ, ಜಿ. ವೆಂಕಟೇಶ ನಾಯಕ್, ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ, ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ಪುರೋಹಿತರು, ಊರಿನ ಹತ್ತು ಸಮಸ್ತರು, ಸೇವಾದಾರ ಕುಟುಂಬಸ್ಥರು, ಸಮಾಜಬಾಂಧವರು ಉಪಸ್ಥಿತರಿದ್ದರು.

Exit mobile version