Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಪ್ರೋತ್ಸಾಹ ಧನ ವಿತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
2023-24ನೇ ಶೈಕ್ಷಣಿಕ ಸಾಲಿನಲ್ಲಿ 592 ಅಂಕ ಗಳಿಸಿ, ರಾಜ್ಯಕ್ಕೆ 7ನೇ ಸ್ಥಾನಿಯಾಗಿರುವ ಸಂಜನಾ.ಎನ್ ರವರಿಗೆ ಶಾಲಾ ಸಂಸ್ಥಾಪನಾ ದಿನದಂದು ನಡೆದ ಸಮಾರಂಭದಲ್ಲಿ ಸುಮಾ. ಯು ಪುತ್ರನ್ ಪ್ರೋತ್ಸಾಹಧನದ ಚೆಕ್ ಹಸ್ತಾಂತರಿಸಿದರು.

ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ರವರು ಪ್ರತಿ ವರ್ಷ 25,000 ರೂಪಾಯಿಯ ಪ್ರೋತ್ಸಾಹ ಧನವನ್ನು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪಿಸಿಎಂಬಿ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ ನೀಡುತ್ತಾ ಅದನ್ನು ವಿದ್ಯಾರ್ಥಿನಿಗೆ ಹಸ್ತಾಂತರಿಸಲಾಯಿತು.

Exit mobile version