Kundapra.com ಕುಂದಾಪ್ರ ಡಾಟ್ ಕಾಂ

ಹೈಕಾಡಿ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸವಾರನ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಬೆಳ್ವೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಬೈಕ್‌ ಸವಾರನಿಗೆ ಲಾರಿ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹೈಕಾಡಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಬೆಳ್ವೆ ನಿವಾಸಿ ನಾಗರಾಜ್ (40) ಎಂದು ಗುರುತಿಸಲಾಗಿದೆ.

ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಬಿದ್ದ ನಾಗರಾಜ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version