Kundapra.com ಕುಂದಾಪ್ರ ಡಾಟ್ ಕಾಂ

ತಗ್ಗರ್ಸೆ ಸರಕಾರಿ ಶಾಲೆಗೆ ಹಳೆ ವಿದ್ಯಾರ್ಥಿಯಿಂದ ಶಾಲಾ ವಾಹನ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾಂತಂತ್ರ್ಯೋತ್ಸವ ದಿನಾಚರಣೆ ಹಾಗೂ ಶಾಲಾ ವಾಹನ ಹಸ್ತಾಂತರ ಸಮಾರಂಭ ಗುರುವಾರ ಜರುಗಿತು.

ಶಾಲೆಯ ಹಳೆ ವಿದ್ಯಾರ್ಥಿ, ಉದ್ಯಮಿ ಸುಭಾಷ್ ಪೂಜಾರಿ ಅವರು 9 ಲಕ್ಷ ಮೌಲ್ಯದ ಶಾಲಾ ವಾಹನವನ್ನು ಶಾಲೆಗೆ ಹಸ್ತಾಂತರಿಸಿದರು.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಸುರೇಶ್ ಪೂಜಾರಿ ಧ್ವಜಾರೋಹಣ ನೆರವೇರಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ಶಂಕರ ಪೂಜಾರಿ, ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಯದರ್ಶಿ ಸುಧಾಕರ ಮೋಗವೀರ, ಎಸ್.ಡಿ.ಎಂ.ಸಿ ಸದಸ್ಯೆ ನಾಗವೇಣಿ, ವಿಧ್ಯಾರ್ಥಿ ನಾಯಕ ವಿನಿತ್ ಕುಮಾರ್, ಉಪಸ್ಥಿತರಿದ್ದರು.

ಈ ಸಂದರ್ಭ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ ಸುಭಾಷ್ ಪೂಜಾರಿ ಹಾಗೂ ವಾಹನಕ್ಕೆ ಇಂಧನಕ್ಕೆ ಧನಸಹಾಯ ಮಾಡಿದ ಉದ್ಯಮಿ ರಾಜೇಶ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮುಕ್ತ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿಯರಾದ ಸಾರಿಕಾ ಕಾರ್ಯಕ್ರಮ ನಿರೂಪಿಸಿ, ಸಂಗೀತಾ ವಂದಿಸಿದರು.

Exit mobile version