Kundapra.com ಕುಂದಾಪ್ರ ಡಾಟ್ ಕಾಂ

ಮರ ಬಿದ್ದು ಮಹಿಳೆ ಮತ್ತು ಜಾನುವಾರುಗಳು ಮೃತ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ವಂಡ್ಸೆ ಬಳಿಯ ಕೆಂಚನೂರಿನಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಬೃಹತ್ ಮರವೊಂದು ಬಿದ್ದು ಮಹಿಳೆ ಮತ್ತು ಎರಡು ದನ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಕೆಂಚನೂರು ಗ್ರಾಮದ ಮಲ್ಲಾರಿ ನಿವಾಸಿ ಅಣ್ಣಪ್ಪಯ್ಯ ಆಚಾರ್ಯ ಅವರ ಪತ್ನಿ ಸುಜಾತಾ ಆಚಾರ್ಯ(44) ಮೃತಪಟ್ಟವರು.

ಮನೆಯ ಸಮೀಪ ಮೇಯಲು ಕಟ್ಟಿರುವ ದನವನ್ನು ತರಲು ಬಂದಿದ್ದಾಗ  ಗಾಳಿ ಮಳೆಯಿಂದಾಗಿ ಮರ ಬುಡಸಹಿತ ಆಕೆಯ ಮೇಲೆ ಮತ್ತು ಎರಡು ದಿನಗಳ ಮೇಲೆ ಬಿದ್ದಿದೆ.

ಸುಜಾತಾ ಅವರು ಪತ್ನಿ ಅಣ್ಣಪ್ಪಯ್ಯ ಆಚಾರ್ಯ ಅಂಗಡಿ ಮಾಡಿಕೊಂಡಿದ್ದು, ನಷ್ಟ ಅನುಭವಿಸಿದ ಕಾರಣ ನಿತ್ಯ ಜೀವನಕ್ಕೆ ದಿನಕೂಲಿ ಕೆಲಸವನ್ನು ಮಾಡುತ್ತಿದ್ದರು.ಅವರಿಗೆ ಓರ್ವ ಪುತ್ರ   ಮನೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು  ಖಾಸಗಿ ಶಾಲೆ ಶಿಕ್ಷಕಿಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಸುಗಳ ಹಾಲನ್ನು ಮಾರಿ ಹಣ ಸಂಪಾದಿಸುತ್ತಿದ್ದರು. ಕಷ್ಟಪಟ್ಟು ದುಡಿದ ಹಣವನ್ನು ಮನೆ ಕಟ್ಟಲು ಬಳಸುತ್ತಿದ್ದರು. ಈ ದುರ್ಘ‌ಟನೆಯಿಂದಾಗಿ ಇಡೀ ಕುಟುಂಬ ಕಂಗಾಲಾಗಿದೆ.

ಘಟನಾ ಸ್ಥಳಕ್ಕೆ ಗ್ರಾ.ಪಂ. ಸದಸ್ಯರಾದ ರಾಜೀವ ಶೆಟ್ಟಿ ಹಾಗೂ ರವಿ ಗಾಣಿಗ, ಗ್ರಾಮಸ್ಥರು, ವಿವಿಧ ಸಂಘಟನೆ ಯುವಕರು ಜೆಸಿಬಿ ಬಳಸಿ ಮರ ತೆರವುಗೊಳಿಸಿದ್ದರು. ಕುಂದಾಪುರ ತಹಶೀಲ್ದಾರ್‌ ಶೋಭಾಲಕ್ಷ್ಮೀ, ಆರ್‌.ಐ. ರಾಘವೇಂದ್ರ, ಪೊಲೀಸ್‌ ಅಧಿ ಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ್‌ ಶೆಟ್ಟಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಗ್ರಾ.ಪಂ.ಸದಸ್ಯರಾದ ರಾಜೀವ ಶೆಟ್ಟಿ ಹಾಗೂ ರವಿ ಗಾಣಿಗ, ಗ್ರಾಮಸ್ಥರು, ವಿವಿಧ ಸಂಘಟನೆ ಯುವಕರು ಜೆಸಿಬಿ ಬಳಸಿ ಮರ ತೆರವುಗೊಳಿಸಿದ್ದರು. ಕುಂದಾಪುರ ತಹಶೀಲ್ದಾರ್‌ ಶೋಭಾಲಕ್ಷ್ಮೀ, ಆರ್‌.ಐ. ರಾಘವೇಂದ್ರ, ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Exit mobile version