Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ವಿವಿಧ ತರಬೇತಿ ಶಿಬಿರ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 3 ರವರೆಗೆ ಬೆಂಗಳೂರು ಕಸ್ತೂರ್ಬಾ ರಸ್ತೆಯ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ವಿವಿಧ ತರಬೇತಿ ಶಿಬಿರ ನಡೆಸಲಾಗಿದೆ.

ತರಬೇತಿ ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ 18 ರಿಂದ 40 ವರ್ಷ ವಯೋಮಿತಿಯ ಅಭ್ಯರ್ಥಿಗಳಿಗೆ 15 ದಿನಗಳ ಜಿಮ್ ಹಾಗೂ ಫಿಟ್ನೆಸ್ ತರಬೇತಿ, ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 3 ರವರೆಗೆ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ 18 ರಿಂದ 40 ವರ್ಷ ವಯೋಮಿತಿಯ ಮಹಿಳಾ ಅಭ್ಯರ್ಥಿಗಳಿಗೆ 13 ದಿನಗಳ ಬ್ಯೂಟೀಷಿಯನ್ ತರಬೇತಿ ಹಾಗೂ ಅಕ್ಟೋಬರ್ 4 ರಿಂದ 9 ರವರೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ 18 ರಿಂದ 40 ವರ್ಷ ವಯೋಮಿತಿಯ ಅಭ್ಯರ್ಥಿಗಳಿಗೆ 6 ದಿನಗಳ ಚಾಟ್ಸ್ ತಯಾರಿಕೆ ತರಬೇತಿ ಶಿಬಿರಕ್ಕೆ ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ:9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. 

Exit mobile version