Site icon Kundapra.com ಕುಂದಾಪ್ರ ಡಾಟ್ ಕಾಂ

ತೆರೆದ ಮನೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು


ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ಆರಕ್ಷಕ ಠಾಣೆ ಅಲ್ಲಿ ಆಯೋಜಿಸಿದ ತೆರೆದ ಮನೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಶುಭದಾ ಆಂಗ್ಲ ಮಾಧ್ಯಮ ಶಾಲೆಯ  10ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಿ ಕಾನೂನಿನ ಮಾಹಿತಿಯನ್ನು ಪಡೆದುಕೊಂಡರು.

ಕಾರ್ಯಕ್ರಮವನ್ನು ಬೈಂದೂರು ಆರಕ್ಷಕ ಠಾಣೆಯ ಸಬ್ಇನ್ಸ್‌ಪೆಕ್ಟರ್ ತಿಮ್ಮೇಶ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಕಾನೂನಿನ ಅರಿವಿನ ಮಾಹಿತಿಯ  ಮನವರಿಕೆ ಮಾಡಿಸಿಕೊಟ್ಟರು. ವಿದ್ಯಾರ್ಥಿಗಳು ಪೊಲೀಸ್ ಠಾಣಾ ಕಾರ್ಯವೈಖರಿಗಳ ಬಗ್ಗೆ ಪ್ರಶ್ನೆಗಳನ್ನು ಕೇಳುವುದರ ಮೂಲಕ ವಿಷಯ ಸಂಗ್ರಹಿಸಿಕೊಂಡರು.

ತದನಂತರ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ನೇರವಾಗಿ ನೋಡಿ ಅರ್ಥೈಸಿಕೊಂಡರು ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸುಬ್ರಹ್ಮಣ್ಯ ಮತ್ತು ವಿಶ್ವನಾಥ್ ಉಪಸ್ಥಿತರಿದ್ದರು.

Exit mobile version