Site icon Kundapra.com ಕುಂದಾಪ್ರ ಡಾಟ್ ಕಾಂ

ಕೃಷಿ ಯಾಂತ್ರೀಕರಣ ಯೋಜನೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಪ.ಜಾ ಮತ್ತು ಪ,ಪಂ. ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿ ಯನ್ನು ಹೊಂದಿರಬೇಕು.

ರೈತರು ಈಗಾಗಲೇ ಪ್ರೂಟ್ಸ್ ಐಡಿ ಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Exit mobile version