Kundapra.com ಕುಂದಾಪ್ರ ಡಾಟ್ ಕಾಂ

ನಮ್ಮೂರ ದಸರಾ – 2024 ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ
: ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ-ಯಡ್ತಾಡಿ ಆಶ್ರಯದಲ್ಲಿ ಅಕ್ಟೋಬರ್ 9 ರಿಂದ 12ರ ತನಕ ನಡೆಯುವ ಹದಿಮೂರನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ “ ನಮ್ಮೂರ ದಸರಾ-2024(ಭಾವ ಭಕ್ತಿಯ ಸಂಗಮ)” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವೇದಮೂರ್ತಿ ಶ್ರೀ ರಾಜೇಶ್ ಐತಾಳ್ ಅವರು ಅನಾವರಣಗೊಳಿಸಿದರು.

ನಂತರ ಮಾತನಾಡಿ, ಯುವಕ ಮಂಡಲಗಳು ಸಾಮಾಜಿಕ ಜವಬ್ದಾರಿಯೊಂದಿಗೆ ಸಮಾಜದಲ್ಲಿ ತನ್ನನ್ನು ತೊಡಗಿಸಿಕೊಂಡಾಗ ಸ್ಥಾಪನೆ ಉದ್ದೇಶಗಳು ಸಾಕಾರಗೊಳ್ಳುತ್ತದೆ. ಧಾರ್ಮಿಕ ಚಿಂತನೆಗಳೊಂದಿಗೆ ಯುವಕರು ಒಂದುಗೂಡಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಪ್ರದೇಶದ ಪ್ರತಿಭೆಗಳ ಅನಾವರಣ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಯುವಕ ಮಂಡಲದ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Exit mobile version