Kundapra.com ಕುಂದಾಪ್ರ ಡಾಟ್ ಕಾಂ

ಆರ್.ಎನ್. ಶೆಟ್ಟಿ ಪ.ಪೂ ಕಾಲೇಜಿನಲ್ಲಿ ಲೆಫ್ಟಿನೆಂಟ್ ಭರತ್ ಬಾಬು ದೇವಾಡಿಗ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
” ಎಂಜಿನಿಯರಿಂಗ್, ಮೆಡಿಕಲ್ ಅಥವಾ ಇನ್ಯಾವುದೇ ವಾಣಿಜ್ಯ,‌ ತಾಂತ್ರಿಕ ಕ್ಷೇತ್ರದಲ್ಲಿ ವ್ಯಾಸಂಗ ಮಾಡಿದವರೂ ಕೂಡ ಸೈನ್ಯವನ್ನು ಸೇರಿ ಸೇವೆ ಸಲ್ಲಿಸಬಹುದು. ಆಗ ಅದು ಶ್ರೇಷ್ಠವಾದ ದೇಶಸೇವೆಯಾಗುವುದೇ ಹೊರತು ವ್ಯಕ್ತಿಗತವಾದ ಹುದ್ದೆಯಾಗಿರುವುದಿಲ್ಲ. ಈ ನಿಟ್ಟಿನಲ್ಲಿ ನನ್ನ ಏಳಿಗೆಗೆ ಕಾರಣವಾದ ಆರ್.ಎನ್.ಎಸ್ ಪಿ.ಯು.ಕಾಲೇಜಿಗೆ ಕೃತಜ್ಞನಾಗಿದ್ದೇನೆ ” ಎಂದು‌ ಭಾರತೀಯ ಭೂಸೈನ್ಯದಲ್ಲಿ‌‌ ಲೆಫ್ಟಿನೆಂಟ್ ಹುದ್ದೆಗೆ ನೇಮಕಾತಿ ಹೊಂದಿದ ಕಾಲೇಜಿನ ಹೆಮ್ಮೆಯ ಹಳೆ ವಿದ್ಯಾರ್ಥಿ ಭರತ್ ಬಾಬು ದೇವಾಡಿಗ ಅವರು ಹೇಳಿದರು.

ಕಾಲೇಜಿನ ವತಿಯಿಂದ ಹಮ್ಮಿಕೊಂಡ‌‌ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾಲೇಜಿನ ಉಪನ್ಯಾಸಕಿಯರು‌ ಲೆಫ್ಟಿನೆಂಟ್ ಭರತ್ ಬಾಬು ದೇವಾಡಿಗ ಅವರಿಗೆ ಆರತಿ ಬೆಳಗಿ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ‌ ಪ್ರಾಂಶುಪಾಲರಾದ ಪ್ರೊ. ನವೀನ‌ ಕುಮಾರ ಶೆಟ್ಟಿ ಅವರು ಮಾತನಾಡಿ , ಅತ್ಯಂತ‌ ಕಠಿಣವಾದ  ಭಾರತೀಯ ಸೇನಾ  ಹುದ್ದೆಯಲ್ಲಿ ಭರತ್ ಬಾಬುರವರು ತಮ್ಮ‌ ಪರಿಶ್ರಮ‌ ಮತ್ತು ದಕ್ಷತೆಯಿಂದ ಯಶಸ್ಸುಗಳಿಸಲಿ ಎಂದು ಶುಭ ಹಾರೈಸಿದರು.

ಉಪಪ್ರಾಂಶುಪಾಲರಾದ ಪ್ರೀತೇಶ್ ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಅವರು ಅತಿಥಿ ಪರಿಚಯ ನೀಡಿದರು. ಕನ್ನಡ ಉಪನ್ಯಾಸಕಿ ದೀಪ್ತಿ ಕೆ. ಅವರು ಅತಿಥಿಗಳನ್ನು ಸ್ವಾಗತಿಸಿದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ ಅರುಣಾ ಹೊಳ್ಳ ಧನ್ಯವಾದ ಸಲ್ಲಿಸಿದರು. ಇಂಗ್ಲೀಷ್ ವಿಬಾಗದ ಮುಖ್ಯಸ್ಥೆ ವನಿತಾ. ಜೆ. ಶೆಟ್ಟಿ ಯವರು ಕಾರ್ಯಕ್ರಮ ನಿರೂಪಿಸಿದರು. 

Exit mobile version