Site icon Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ ಜನತಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ದಸರಾ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿಯಲ್ಲಿ ಸೆ. 29ರಂದು ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಯೋಗಾಸನ ಸ್ಪರ್ಧೆಯಲ್ಲಿ ವಿಜೇತರಾದ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ತನ್ವಿತಾ ಪೂಜಾರಿ ಹಾಗೂ ಧನ್ವಿ ಮರವಂತೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ 67 ಕೆ.ಜಿ.ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಆದರ್ಶ ಬೆಳ್ಳಿಯ ಪದಕ ಪಡೆದಿರುತ್ತಾನೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version