ಕುಂದಾಪುರ: ರೋಟರಿ ಕ್ಲಬ್ ಸಿದ್ದಾಪುರ-ಹೊಸಂಗಡಿಯ ಆತಿಥ್ಯದಲ್ಲಿ ನಡೆದ ರೋಟರಿ ವಲಯ ಸಾಂಸ್ಕೃತಿಕ ಸ್ಪರ್ಧೆ ರಂಗತರಂಗದಲ್ಲಿ ಗಾಯನ ಸ್ಪರ್ಧೆಯಲ್ಲಿ ಉದ್ಯಮಿ ರವಿರಾಜ್ ಶೆಟ್ಟಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ರೋಟರಿ ಕ್ಲಬ್ ಕುಂದಾಪುರದ ಪೂರ್ವಾದ್ಯಕ್ಷರಾಗಿ, ಪ್ರಸಕ್ತ ಸಾಲಿನಲ್ಲಿ ರೋಟರಿ ವಲಯ 1ರ ಕ್ರೀಡಾ ಸಂಯೋಜಕರಾಗಿ, ಹಂಗಳೂರಿನ ಗೆಳೆಯರ ಬಳಗದ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದಾರೆ.