Site icon Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯಮಟ್ಟದ ಗೀತಾ ವಾಚನ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ರಿಷಿಕಾ ದೇವಾಡಿಗ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ, ಕುಂದಾಪುರ ಇಲ್ಲಿಯ 9ನೇ ತರಗತಿಯ ವಿದ್ಯಾರ್ಥಿನಿ  ರಿಷಿಕಾ ಆರ್. ದೇವಾಡಿಗ ಅವರು ಪರಂಪರಾ ಕಲ್ಚರಲ್ ಫೌಂಡೇಶನ್, ಬೆಂಗಳೂರು ಇವರು ನಡೆಸಿದ ರಾಜ್ಯಮಟ್ಟದ ದೇಶಭಕ್ತಿ ಗೀತಾ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ.  ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ ದೇಶ ಮತ್ತು ವಿದೇಶದ ಅನಿವಾಸಿ ಭಾರತೀಯ ವಿದ್ಯಾರ್ಥಿಗಳೂ ಸೇರಿದಂತೆ ಸುಮಾರು 262 ಸ್ಪರ್ಧಾರ್ಥಿಗಳು ಪಾಲ್ಗೊಂಡಿರುತ್ತಾರೆ.

ರಿಷಿಕಾ ಈಗಾಗಲೇ ಜಿಲ್ಲಾ ಮತ್ತು ರಾಜ್ಯಮಟ್ಟದ ಹಲವಾರು ಸ್ಪರ್ಧೆಗಳಲ್ಲಿ ವಿಜೇತಳಾಗಿದ್ದಳು. ಅವಳಿಗೆ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಹಾಗೂ ಪ್ರಾಚಾರ್ಯರೂ ಆದ  ಶರಣ ಕುಮಾರ ಅವರು ಅಭಿನಂದಿಸಿದ್ದಾರೆ.

Exit mobile version