Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಜಪ್ತಿ ಗ್ರಾಮದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಲಾಬ್‌ನಿಂದ ಬಿದ್ದು ಮೃತಪಟ್ಟಿದ್ದಾರೆ.

ಜಾರ್ಖಂಡ್‌ನ ಲೋಹರ್ದಗಾ ಜಿಲ್ಲೆಯ ಜೋಗಿಂದರ್ ಒರೋನ್ (29) ಮೃತ ವ್ಯಕ್ತಿ. ಇವರು ಕೆಲಸಕ್ಕೆ ರಜೆ ಮಾಡಿ ಸರೋಜ್ ಒರೊನ್, ಶಬ್ಬಿರ್ ಹಾಗೂ ಮುನ್ನಾ ಒರೋನ್ ಜತೆ ಕುಡಿದು ಫ್ಯಾಕ್ಟರಿ ಕಟ್ಟಡದ ಸ್ಲಾಬ್‌ನ ಮೇಲೆ ಮೊಬೈಲ್‌ನಲ್ಲಿ ಮಾತಾಡುತ್ತಿದ್ದಾಗ ಸುಮಾರು 15 ಅಡಿ ಎತ್ತರದಿಂದ ಕೆಳಗಡೆ ಸಿಮೆಂಟ್ ನೆಲದ ಮೇಲೆ ಬಿದ್ದು ಮೃತಪಟ್ಟಿದ್ದಾರೆ. ಪ್ರಕರಣ ದಾಖಲಾಗಿದೆ.

Exit mobile version