Kundapra.com ಕುಂದಾಪ್ರ ಡಾಟ್ ಕಾಂ

ವಿಧಾನ ಪರಿಷತ್‌ ಉಪಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಗೆಲುವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಮಂಗಳೂರು,ಅ.24:
ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್‌ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು 1600 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಬೆಳಗ್ಗೆ 8 ಗಂಟೆಯಿಂದಲೇ ಮಂಗಳೂರಿನ ಸಂತ ಅಲೋಷಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಆರಂಭಗೊಂಡಿತ್ತು. ಬಿಜೆಪಿ- 3654, ಕಾಂಗ್ರೆಸ್- 1957 ಮತ್ತು ಎಸ್‌ಡಿಪಿಐ-195 ಮತಗಳನ್ನು ಪಡೆಯುವುದರೊಂದಿಗೆ ಮತ ಎಣಿಕೆ ಮುಕ್ತಾಯಗೊಂಡಿದೆ.

ಈ ವೇಳೆ ಕೇಂದ್ರ ಚುನಾವಣಾ ವೀಕ್ಷಕ ಪಂಕಜ್‌ ಕುಮಾರ್‌ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.

Exit mobile version