ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಮೊಳಹಳ್ಳಿ ಗ್ರಾಮದ ನಿವಾಸಿ ವಿಶ್ವನಾಥ್ (53) ಅವರು ಭಾನುವಾರದಂದು ಎದೆನೋವಿಗೊಳಗಾಗಿ ಮೃತಪಟ್ಟಿದ್ದಾರೆ.
ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಮಧ್ಯಾಹ್ನದ ವೇಳೆ ಎದೆನೋವು ಕಾಣಿಸಿದ್ದು, ಕೂಡಲೇ ಸ್ಥಳೀಯ ಕ್ಲಿನಿಕ್ಗೆ ಕರೆದುಕೊಂಡು ಹೋಗಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
