Site icon Kundapra.com ಕುಂದಾಪ್ರ ಡಾಟ್ ಕಾಂ

ಕಟ್ಕೆರೆ ಯುವಶಕ್ತಿ ಯುವಕ ಮಂಡಲ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಕಟ್ಕೆರೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದಿ.
ಕುಂದಾಪುರ:
ತಾಲೂಕಿನ ಕಟ್ಕೆರೆ ಯುವಶಕ್ತಿ ಯುವಕ ಮಂಡಲ ಇದರ ನೂತನ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಕಟ್ಕೆರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗೌರವ ಅಧ್ಯಕ್ಷರಾಗಿ ಗಣೇಶ್ ಶೆಟ್ಟಿ ಕಟ್ಕೆರೆ, ಉಪಾಧ್ಯಕ್ಷರಾಗಿ ರಾಘವೇಂದ್ರ ಬಿ.ಕೆ., ಸಂತೋಷ್ ಪೂಜಾರಿ, ಮಧುಕರ್ ಕಟ್ಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀಶಾ ಕೆ.ಎಸ್‌, ಜೊತೆ ಕಾರ್ಯದರ್ಶಿಯಾಗಿ ಮಂಜುನಾಥ್ ಪೂಜಾರಿ, ಕೋಶಾಧಿಕಾರಿಯಾಗಿ ರಮೇಶ್ ಕಟ್ಕೆರೆ, ಜೊತೆ ಕೋಶಾಧಿಕಾರಿಯಾಗಿ ಪ್ರಜ್ವಲ್ ಪೂಜಾರಿ, ಗೌರವ ಸಲಹೆಗಾರರಾಗಿ ಲಕ್ಷ್ಮಣ್‌ ಶೆಟ್ಟಿ ಕಟ್ಕೆರೆ, ಮಹೇಶ್ ಭಟ್ ಕಟ್ಕೆರೆ, ಪ್ರಶಾಂತ್ ಶೆಟ್ಟಿ ಕಟ್ಕೆರೆ, ಪ್ರವೀಣ್ ಶೆಟ್ಟಿ ಕಟ್ಕೆರೆ, ಉದಯ್ ಕಟ್ಕೆರೆ, ಎ. ಮೋಹನ್ ಕಟ್ಕೆರೆ, ಕ್ರೀಡಾ ಕಾರ್ಯದರ್ಶಿಯಾಗಿ ಶಿವರಾಜ್ ಪೂಜಾರಿ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ರಾಜೇಂದ್ರ ಕಟ್ಕೆರೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಾಗರಾಜ್‌ ಕಟ್ಕೆರೆ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸತೀಶ್ ಕಟ್ಕೆರೆ ಅವರನ್ನು ಸರ್ವಾನುಮತದಿಂದ  ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Exit mobile version