Kundapra.com ಕುಂದಾಪ್ರ ಡಾಟ್ ಕಾಂ

ಶಂಕರನಾರಾಯಣ: ಯುವತಿ ಬಾವಿಗೆ ಹಾರಿ ಆತ್ಮಹತ್ಯೆ

ಶಂಕರನಾರಾಯಣ: ಇಲ್ಲಿನ ಆರ್ಡಿ ಅಲ್ಬಾಡಿ ಗ್ರಾಮದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅಲ್ಪಾಡಿಯ ಸುರೇಂದ್ರ ಶೆಟ್ಟಿ ಎಂಬುವವರ ಮಗಳು ರೀತಾ(23) ಮೃತ ದುರ್ದೈವಿ.

ಎಂಡೋಸಲ್ಫಾನ್ ಮಾರಕ ರೋಗಕ್ಕೆ ತುತ್ತಾಗಿದ್ದ ರೀತಾ ಕಳೆದ ಹದಿನೈದು ವರ್ಷಗಳಿಂದ ಹಾಸಿಗೆ ಹಿಡಿದಿದ್ದು ತನ್ನೆಲ್ಲಾ ಕೆಲಸಗಳಿಗೆ ಮನೆಯವರನ್ನೇ ಅವಲಂಬಿಸಿದ್ದಳು. ಇದರಿಂದ ಮಾನಸಿಕವಾಗಿ ತೀವ್ರ ಕುಗ್ಗಿಹೋಗಿದ್ದ ಆಕೆ ಇಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆನ್ನಲಾಗಿದೆ. ಮನೆಯವರು ಬಂದು ರೀತಾಳಿಗಾಗಿ ಹುಡುಕಾಟ ನಡೆಸಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version