Site icon Kundapra.com ಕುಂದಾಪ್ರ ಡಾಟ್ ಕಾಂ

ಯು.ಸಿ.ಇ.ಇ.ಡಿ ಸಾಮಾನ್ಯ ಪ್ರವೇಶ ಪರೀಕ್ಷೆ ಹೆಮ್ಮಾಡಿ ಜನತಾ ಪಿಯು ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ರ್‍ಯಾಂಕ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನಡೆಸುವ UCEED (ವಿನ್ಯಾಸಕ್ಕಾಗಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ) ಪ್ರವೇಶ ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಮೂಲ್ಯ ಅಖಿಲ ಭಾರತ ಮಟ್ಟದಲ್ಲಿ 3827‌ನೇ ರ್‍ಯಾಂಕ್ ಪಡೆದಿದ್ದಾರೆ.

ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದರ ಮೂಲಕ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ‌ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version