Kundapra.com ಕುಂದಾಪ್ರ ಡಾಟ್ ಕಾಂ

ಬಾರಕೂರು ಸ.ಪ್ರ.ದ ಕಾಲೇಜು: ಏಡ್ಸ್ ಮತ್ತು ರಕ್ತದಾನದ ಜಾಗ್ರತಿ ಕಾರ್ಯಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಏಡ್ಸ್ ಎಂಬ ಮಾರಕ ಕಾಯಿಲೆಯ ಬಗ್ಗೆ ಅರಿವು ಮೂಡಿಸುದರ ಮೂಲಕ ತಡೆಗಟ್ಟುವುದರಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾದುದು. ಏಡ್ಸ್ ಸಂತ್ರಸ್ತರನ್ನು ಗೌರಪೂರ್ಣವಾಗಿ ನೋಡಿಕೊಂಡು ಅವರ ಬದುಕುವ ಹಕ್ಕನ್ನು ಕಾಪಾಡುವುದು ನಮ್ಮ ಉದ್ದೇಶವಾಗಿರಬೇಕು ಎಂದು ರುಕ್ಮಿಣಿ ಶೆಡ್ತಿ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರಕೂರಿನ ಪ್ರಾಂಶಪಾಲರಾದ ಡಾ. ಎಸ್. ಭಾಸ್ಕರ ಶೆಟ್ಟಿ ಸಲ್ವಾಡಿ ಹೇಳಿದರು.

ಅವರು ಬಾರಕೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಏನ್.ಎಸ್.ಎಸ್, ರೆಡ್ ರಿಬ್ಬನ್ ಕ್ಲಬ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶದ ಸಹಯೋಗದಲ್ಲಿ ಆಯೋಜಿಸಿದ್ದ ಏಡ್ಸ್ ಮತ್ತು ರಕ್ತದಾನದ ಜಾಗ್ರತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಏಡ್ಸ್ ಪಿಡುಗಿನ ಹಿನ್ನಲೆ, ಪ್ರಸ್ತುತ ಪರಿಸ್ಥಿಯಲ್ಲಿ ಯುವ ಸಮುದಾಯ ಈ ಪಿಡುಗಿಗೆ ಗುರಿಯಾಗುವ ಸಾಧ್ಯತೆಗಳು ಮತ್ತು ಏಡ್ಸ್ ಬಗ್ಗೆ ವಹಿಸಬೇಕಾದ ಜಾಗ್ರತಿ ಬಗ್ಗೆ ಮನವರಿಕೆ ಮಾಡಿದರು. ರಕ್ತದಾನ ಮಾಡಲು ಮುಂದಾಗುವ ಮೊದಲು ನೀವು ಒಳ್ಳೆಯ ದೈಹಿಕ ಸದೃಢತೆಯ ಜೊತೆಗೆ ಉತ್ತಮ ಆರೋಗ್ಯವನ್ನು ಹೊಂದಿರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದ ಉಡುಪಿ ಜಿಲ್ಲಾ ಮೇಲ್ವಿಚಾರಕರಾದ ಮಹಾಬಲೇಶ್ವರ್ ಬಿ., ಅವರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಬಿಕಾಂ ವಿದ್ಯಾರ್ಥಿ ಚೈತ್ರ ನಿರೂಪಿಸಿ, ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿ ರಕ್ಷಿತಾ ಸ್ವಾಗತಿಸಿ, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಾಧಾಕೃಷ್ಣ ನಾಯಕ್ ವಂದಿಸಿದರು. ಈ ಜಾಗ್ರತಿ ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಿಸಿದ್ದರು.  

Exit mobile version