ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ಬೈಂದೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 2025-26 ನೇ ಶೈಕ್ಷಣಿಕ ಸಾಲಿನಲ್ಲಿ 6 ನೇ ತರಗತಿಗೆ ಉಚಿತ ಪ್ರವೇಶಾತಿಗಾಗಿ ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2573596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಮತ್ತು ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

