Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ ಜನತಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಕುಂದಾಪುರ: ಹೆಮ್ಮಾಡಿ ಜನತಾ ಪ.ಪೂ ಕಾಲೇಜಿನಲ್ಲಿ ನ.೨೬ ರಂದು ಭಾರತೀಯ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಹಾಗೂ ರಾಜಕೀಯ ಶಾಸ್ತ್ರ ಉಪನ್ಯಾಸಕ ಸುಧಾಕರ ವಕ್ವಾಡಿ ಅವರು ಸಂವಿಧಾನದ ಪೂರ್ವ ಪೀಠಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಮಾಣ ವಿಧಿ ಬೋಧಿಸಿಸುತ್ತಾ ಸಂವಿಧಾನವು ರಾಷ್ಟ್ರಕ್ಕೆ ಸೂಚಿಸಿರುವ ಗುರಿ ಮತ್ತು ಉದ್ದೇಶಗಳನ್ನು ಪೀಠಿಕೆ ಸ್ಪಷ್ಟಪಡಿಸುತ್ತದೆ. ಪ್ರಸ್ತಾವನೆಯು ಸಂವಿಧಾನದ ಅವಿಭಾಜ್ಯ ಅಂಗವಾಗಿದ್ದು, ಸಂವಿಧಾನ ನಿರ್ಮಾಪಕರು ರಾಷ್ಟ್ರವು ಮುಂದೆ ಹೇಗೆ ಸಾಗಬೇಕೆಂದು ಸೂಚಿಸಿರುವ ಮಾರ್ಗ ಮತ್ತು ಅದರಲ್ಲಿ ಅಡಕವಾಗಿರುವ ಅಂಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ವಿವರಿಸಿದರು.

Exit mobile version