Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಹಿಂದೂ ಪ್ರವಾಸಿಗರ ಮೇಲಿನ ಧರ್ಮಧಾರಿತ ನರಮೇಧವನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಪ್ರತಿಭಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ಕಾಶ್ಮೀರದ ಪಹಲ್ಯಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಧರ್ಮಧಾರಿತ ನರಮೇಧವನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬೈಂದೂರು ಮಂಡಲ ಅಧ್ಯಕ್ಷರಾದ ಗಜೇಂದ್ರ ಎಸ್. ಬೇಲೆಮನೆ ಅವರ ನೇತೃತ್ವದಲ್ಲಿ ಉಪ್ಪುಂದ ದ ಕಾರ್ಯಕರ್ತ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು.

ಈ ವಿದ್ವಂಸಕ  ಘಟನೆಯನ್ನು ಉದ್ದೇಶಿಸಿ ಬೈಂದೂರಿನ ಶಾಸಕದಾದ ಗುರುರಾಜ ಗಂಟಿಹೊಳೆ ಅವರು ಮಾತನಾಡಿ, ಮತಾಂಧ ಇಸ್ಲಾಮಿಕ್ ಭಯೋತ್ಪಾದಕರಿಗೆ ಖಂಡಿಸಿದರು.

ಈ ಸಂದರ್ಭದಲ್ಲಿ , ಒಬಿಸಿ ಮೋರ್ಚಾ ಅಧ್ಯಕ್ಷರಾದ ಶಿವರಾಜ್ ಪೂಜಾರಿ, ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಅಶೋಕ್ ಎನ್‌ಡಿ, ಬಿಜೆಪಿ ಜಿಲ್ಲಾ ಯುವ ಮೋರ್ಚ ಕಾರ್ಯದರ್ಶಿ ಸುಧಾಕರ್ ಶೆಟ್ಟಿ ನೆಲ್ಯಾಡಿ, ಶಾಂತಿ ಖಾರ್ವಿ ಗಂಗೊಳ್ಳಿ, ಅಶೋಕ್ ದೇವಾಡಿಗ ಕಂಚಿಕಾನ್, ಕೃಷ್ಣ ಖಾರ್ವಿ ಕೊಡಿರಿ,  ಅಶೋಕ್ ನಾಡ, ರವಿಚಂದ್ರ ವಿ. ಕೆ., ಗೋಪಾಲ್ ಪೂಜಾರಿ ವಸ್ರೆ, ದಿವಾಕರ್ ಶೆಟ್ಟಿ, ಪ್ರದೀಪ್ ಉಪ್ಪುಂದ, ಜಗದೀಶ್ ಆಲಂದೂರ್, ಅನುರ ಮೆಂಡನ್, ಜಯಂತ್ ಗಂಗೊಳ್ಳಿ, ಮಹೇಶ್ ಪೈ ಹಾಗೂ ಬಿಜೆಪಿಯ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version