Site icon Kundapra.com ಕುಂದಾಪ್ರ ಡಾಟ್ ಕಾಂ

ಎಸ್ಎಸ್ಎಲ್‌ಸಿಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್‌ ಪಡೆದ ವರಪ್ರಸಾದ್ ಬಿಜೂರುಗೆ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವರಪ್ರಸಾದ್ ಎಂ. ಬಿಜೂರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 619 ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ಏಳನೇ ರ್ಯಾಂಕ್‌ ಪಡೆದಿದ್ದು, ವಿದ್ಯಾರ್ಥಿಯನ್ನು ಸನ್ಮಾನಿಸಲಾಯಿತು.

ಉಪ್ಪುಂದ ಕಲ್ಯಾಣಿ ಪರಮೇಶ್ವರ ಭಟ್ ಟ್ರಸ್ಟ್ ಬೆಂಗಳೂರು ಇವರ ಆಶ್ರಯದಲ್ಲಿ ವಿದ್ಯಾರ್ಥಿಯ ಸ್ವಗೃಹದಲ್ಲಿ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರಾದ ದೀಟಿ ಸೀತಾರಾಮ ಮಯ್ಯ, ನಿವೃತ್ತ ಶಿಕ್ಷಕರಾದ ರಾಜಾರಾಮ್ ಭಟ್, ಆನಂದ ಗಾಣಿಗ, ವೆಂಕಟರಮಣ ಶೇರುಗಾರ್, ಮಂಜು ದೇವಾಡಿಗ ಅರೆಹಾಡಿ, ಗಣೇಶ್ ಉಪ್ಪುಂದ, ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ, ಅನಿಲ್ ಡಿ. ಉಪ್ಪುಂದ, ಶಿಕ್ಷಕರಾದ ಮಂಜುನಾಥ್ ಶೇರುಗಾರ್, ಭಾರತಿ ಮೊದಲಾದವರು ಉಪಸ್ಥಿತರಿದ್ದರು.

ಯು ಸಂದೇಶ್ ಭಟ್ ಕಾರ್ಯಕ್ರಮ ನಿರೂಪಿಸಿ, ಅತಿಥಿಗಳನ್ನು ಸ್ವಾಗತಿಸಿದರು.  ಪುರುಷೋತ್ತಮದಾಸ್ ಉಪ್ಪುಂದ ವಂದಿಸಿದರು.

Exit mobile version