Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ ಕಾರು ಡಿಕ್ಕಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ರಾ.ಹೆ 66ರ ಹಂಗಳೂರು ಮಸೀದಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸದೆ.

ಕೊಲ್ಲೂರು ದೇವರ ದರ್ಶನ ಪಡೆದು ಕುಂದಾಪುರ ಕಡೆಯಿಂದ ಕೇರಳ ಕಾಸರಗೋಡಿಗೆ ಕಾರಿನಲ್ಲಿ ಹಿಂದಿರುಗುತ್ತಿದ್ದ ಕುಟುಂಬವೊಂದು ಕುಂದಾಪುರದ ಹಂಗಳೂರು ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ಅಪಘಾತದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ನಿಂತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ಕುಂದಾಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಿಮಿಸಿ ಪರಿಶೀಲಿಸಿದ್ದಾರೆ.

Exit mobile version