Site icon Kundapra.com ಕುಂದಾಪ್ರ ಡಾಟ್ ಕಾಂ

ಬಸ್ಸಿಗೆ ಬೈಕ್‌ ಡಿಕ್ಕಿಯಾಗಿ ಸವಾರನ ಸಾವು, ಹೊತ್ತಿ ಉರಿದ ಬೈಕ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ,ಜೂ.16:
ತಾಲೂಕಿನ ಹೆಮ್ಮಾಡಿ – ಕೊಲ್ಲೂರು ಮಾರ್ಗದಲ್ಲಿ ಬಸ್ಸಿಗೆ ಬೈಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಅಪಘಾತದ ಸಂದರ್ಭ ಬೈಕಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿದೆ. ಮೃತ ಬೈಕ್ ಸವಾರನನ್ನು ಸಿಗಂದೂರಿನ ಶರತ್‌ (25) ಎಂದು ಗುರುತಿಸಲಾಗಿದೆ.

ಸಿಗಂದೂರಿನಿಂದ ಕುಂದಾಪುರಕ್ಕೆ ಸಂಬಂಧಿಕರ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕೆಂಚನೂರು ಮಲ್ಲಾರಿ ರಸ್ತೆಯ ತಿರುವಿನಲ್ಲಿ ಸವಾರ ನಿಯಂತ್ರಣ ತಪ್ಪಿ ಹೆಮ್ಮಾಡಿ ಕಡೆಯಿಂದ ಬರುತ್ತಿದ್ದ  ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಶರತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸಂಪೂರ್ಣ ಬೆಂಕಿಯಿಂದಾಗಿ ಸುಟ್ಟು ಕರಕಲಾಗಿದೆ.

Exit mobile version