Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ: ಸ್ವಯಂಪ್ರೇರಿತ ರಕ್ತದಾನ ಶಿಬಿರ, 86 ಯೂನಿಟ್ ರಕ್ತ ಸಂಗ್ರಹ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ರಕ್ತದಾನಿ ಬಳಗ ಮರವಂತೆ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ‌ರಿ. ಉಡುಪಿ, ರೆಡ್ ಕ್ರಾಸ್ ಕುಂದಾಪುರ ‌ಸಹಕಾರದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ‌ಶಾಲೆ ಮರವಂತೆ ಇಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ರಕ್ತದ ಆಪತ್ಭಾಂದವ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣಿಪಾಲ್  ಉದ್ಘಾಟಿಸಿದರು.

ಕಳೆದ ಹಲವು ವರ್ಷಗಳಿಂದ ರಕ್ತದಾನ ಕ್ಷೇತ್ರದಲ್ಲಿ ಸಲ್ಲಿಸಿದ ‌ಸೇವೆಯನ್ನು ಗುರುತಿಸಿ ಅಭಯಹಸ್ತ ‌ಉಡುಪಿ ಇದರ ಸದಸ್ಯರಾದ  ಪ್ರಶಾಂತ್ ತಲ್ಲೂರು ಹಾಗೂ ದಿನೇಶ್ ಕಾಂಚನ್ ಬಾರಿಕೆರೆ ಅವರನ್ನು  ವೇದಿಕೆಯಲ್ಲಿರುವ ಗಣ್ಯರ ಉಪಸ್ಥಿತಿಯಲ್ಲಿ  ಅವರನ್ನು ಸನ್ಮಾನಿಸಲಾಯಿತು.

ಈ ಯಶಸ್ವಿ ರಕ್ತದಾನ ಶಿಬಿರದಲ್ಲಿ‌ 86 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಕಳೆದ 6 ವರ್ಷಗಳಿಂದ ಯಶಸ್ವಿ ರಕ್ತದಾನ ಶಿಬಿರವನ್ಮು ಆಯೋಜನೆ ಮಾಡುತ್ತಿರುವ ವಿಘ್ನೇಶ್ ಮರವಂತೆ ಅವರಿಗೆ ಧನ್ಯವಾದ ಅರ್ಪಿಸಲಾಯಿತು.

Exit mobile version