ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚುನಾವಣೆಯ ಪರಿಕಲ್ಪನೆ ಮತ್ತು ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ 2025-26ನೇ ಸಾಲಿನ ವಿದ್ಯಾರ್ಥಿ ನಾಯಕ ಮತ್ತು ಉಪನಾಯಕರ ಸ್ಥಾನಕ್ಕೆ ಚುನಾವಣೆಯನ್ನು ನಡೆಸಲಾಯಿತು.
ಸಾರ್ವತ್ರಿಕ ಚುನಾವಣೆಯ ಅರಿವು ಮೂಡಿಸುವ ಸಲುವಾಗಿ ಚುನಾವಣೆಯನ್ನು ಇ.ವಿ.ಎಮ್ ಆಪ್ ಮೂಲಕ ನಡೆಸಲಾಯಿತು.
ಶಾಲಾ ನಾಯಕನಾಗಿ ಹರಿದಾಸ್ ಆರ್ ಮಲ್ಯ 10ಆ, 215 ಮತಗಳಿಂದ ಮತ್ತು ಉಪನಾಯಕಿಯಾಗಿ ಪ್ರಣತಿ 9ಆ, 314 ಮತಗಳಿಂದ ಆಯ್ಕೆಯಾಗಿದ್ದಾರೆ.
ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಭೋದಕ – ಭೋದಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

