Kundapra.com ಕುಂದಾಪ್ರ ಡಾಟ್ ಕಾಂ

ಕಾಲೇಜಿನಲ್ಲಿ ಕನಕ ಜಯಂತಿ ಆಚರಣೆ

ಕುಂದಾಪುರ: ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ನ.೨೮ ರಂದು ಕನಕದಾಸ ಜಯಂತಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಅವರು ಮಾತನಾಡಿ, ಕನಕದಾಸರು ತಮ್ಮ ಕೀರ್ತನೆ ಮತ್ತು ಸಾಹಿತ್ಯದ ಮೂಲಕ ಜಾತಿ.ಮತ, ಮೇಲು- ಕೀಳು ಎಂಬ ತಾರತಮ್ಯವನ್ನು ಹೋಗಲಾಡಿಸಿ, ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ್ದಾರೆ ಎಂದರು. ಉಪನ್ಯಾಸಕರುಗಳಾದ ಮಂಜುನಾಥ.ಕೆ.ಎಸ್, ಗೀತಾ ಜೋಷಿ, ಹರೀಶ್ ಕಾಂಚನ್, ಗಿರಿಜಾ ಕೊಡೇರಿ, ಜೆಸ್ಸಿ ಡಿಸಿಲ್ವ, ಶ್ರೀಲತಾ.ಕೆ ಉಪಸ್ಥಿತರಿದ್ದರು.

Exit mobile version