Site icon Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿಯ ಜನತಾ ಅನುದಾನಿತ ಪ್ರೌಢಶಾಲೆಗೆ ಬಸ್ ಕೊಡುಗೆ ನೀಡಿದ ಗಣೇಶ ಮೊಗವೀರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ: ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ವಿ.ವಿ.ವಿ.ಮಂಡಳಿ ರಿ. ಆಡಳಿತ ಮಂಡಳಿಗೆ ಒಳಪಟ್ಟಿರುವ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಹೆಮ್ಮೆಯ ಶಿಕ್ಷಣ ಸಂಸ್ಥೆ.

ಗ್ರಾಮೀಣ ಭಾಗಗಳಿಂದ ನೂರಾರು ವಿದ್ಯಾರ್ಥಿಗಳು ಈ ಶಿಕ್ಷಣ ಸಂಸ್ಥೆಯಲ್ಲಿ ದಾಖಲಾತಿ ಪಡೆದುಕೊಂಡು ಶಿಕ್ಷಣ ಪಡೆಯುತ್ತಿರುವ ಸಂದರ್ಭದಲ್ಲಿ ಶಾಲಾ ಅಗತ್ಯ ಸೌಲಭ್ಯಗಳಲ್ಲಿ ಒಂದಾಗಿರುವ ಶಾಲಾ ವಾಹನ ಸೌಲಭ್ಯವನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಶಾಲಾ ವಾಹನವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು,ಶಾಲೆ ಹಾಗೂ ಪದವಿಪೂರ್ವ ಕಾಲೇಜಿನ‌ ಬೋಧಕ/ಬೋಧಕೇತರ ವೃಂದದವರು,ಶಾಲಾ ಹಳೆ ವಿದ್ಯಾರ್ಥಿ ಶ್ರೀಧರ್ ರಾವ್ ಹಾಗೂ ವಿದ್ಯಾರ್ಥಿಗಳು  ಉಪಸ್ಥಿತರಿದ್ದರು.

Exit mobile version