Site icon Kundapra.com ಕುಂದಾಪ್ರ ಡಾಟ್ ಕಾಂ

ಉತ್ತಮ ಆರೋಗ್ಯವೇ ನಿಜವಾದ ಸಂಪತ್ತು: ಡಾ. ಸೋನಿ ಡಿಕೋಸ್ಟ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ದಿನನಿತ್ಯದ ಪ್ರಾರ್ಥನೆ, ವ್ಯಾಯಾಮ, ಗುಣಮಟ್ಟದ ಆಹಾರ ಪದ್ಧತಿ ಹಾಗೂ ಒತ್ತಡ ನಿರ್ವಹಣೆ ಇಂತಹ ಆರೋಗ್ಯಕರ ಅಭ್ಯಾಸಗಳಿಂದ ಮಾತ್ರ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ಕುಂದಾಪುರದ ಇಶಾನಿ ಮೆಡಿಕಲ್ ಸೆಂಟರ್‌ನ ವೈದ್ಯಾಧಿಕಾರಿ ಡಾ| ಸೋನಿ ಡಿಕೋಸ್ಟ ಹೇಳಿದರು.

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಉತ್ತಮ ಆರೋಗ್ಯ’ ವಿಷಯದ ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ., ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಕಾರ್ಯಕ್ರಮದ ಸಂಯೋಜಕ ಹಾಗೂ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಯೋಗೀಶ್ ಶ್ಯಾನುಭೋಗ್, ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕಿ ಹಾಗೂ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಜೋಸ್ಲಿನ್ ಆರ್. ಅಲ್ಮೇಡಾ ನಿರೂಪಿಸಿ, ವಂದಿಸಿದರು. 

                                                                                                                         

Exit mobile version