Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಹೊಳೆಗೆ ಬಿದ್ದು ವ್ಯಕ್ತಿ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು
: ತಾಲೂಕಿನ ಗಂಗನಾಡು ನಿವಾಸಿ ಕೃಷ್ಣ ಮರಾಠ (75) ಎಂಬವರು ಕ್ಯಾರತೋಡ ಹೊಳೆ ದಾಟುವಾಗ ಕಾಲು ಜಾರಿ ಬಿದ್ದು ಆಕಸ್ಮಿಕವಾಗಿ ಮೃತಪಟ್ಟಿದ್ದಾರೆ.

ಅವರು ಜು.25ರಂದು ಪುತ್ರಿ ಜಯಂತಿ ಮನೆಗೆ ಹೋಗಿದ್ದು, ಸಂಜೆ ವಾಪಾಸು ಬರುವುದಾಗಿ ಹೇಳಿದವರು ನಾಪತ್ತೆಯಾಗಿದ್ದರು. ಜು.28ರಂದು ಮೃತಪಟ್ಟ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ.

ಹೊಳೆ ದಾಟುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪುತ್ರ ಭಾಸ್ಕರ ಮರಾಠ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version