Site icon Kundapra.com ಕುಂದಾಪ್ರ ಡಾಟ್ ಕಾಂ

ಅಂಪಾರು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸ್ವೇಟರ್ ವಿತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕೇಂದ್ರ ಸರಕಾರದ ರಾಷ್ಟ್ರೀಯ ಗ್ರಾಮೀಣ ಸಾಕ್ಷಾರತ ಮಿಷನ್ ಯೋಜನೆಯ ಅಡಿಯಲ್ಲಿಅಂಪಾರು ಗ್ರಾಮದ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 4ನೇ ತರಗತಿ ಮಕ್ಕಳಿಗೆ ಉಚಿತ ಸ್ವೇಟರ್ ವಿತರಿಸಿಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಗೋಪಾಲಕೃಷ್ಣ ಕಿಣಿ, ಉಪಾಧ್ಯಕ್ಷರಾದ ವನಜ ಮೊಗವೀರ, ಸದಸ್ಯರಾದ ಕೆ. ಅಶೋಕ್, ಸತೀಶ್ ಶೆಟ್ಟಿ ಹಡಾಳಿ, ನವೀನ್ ಶೆಟ್ಟಿ ಹೊಸಿಮನೆ, ಭಾರತಿ ಶೇಟ್, ಶಕ್ತಿ ಕೇಂದ್ರ ಅಧ್ಯಕ್ಷರಾದ ಅರುಣ್ ಕುಮಾರ್ ಶೆಟ್ಟಿ, ಮುಖಂಡರಾದ ಮಹೇಂದ್ರ ಭೋವಿ ಉಪಸ್ಥಿತರಿದ್ದರು.

Exit mobile version