ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ, ಕರ್ನಾಟಕ ಯೋಗಾಸನ ಸ್ಪೋಟ್ಸ್ ಅಸೋಸಿಯೇಶನ್ ಬೆಂಗಳೂರು, ಪತಂಜಲಿ ಯೋಗ ಪೀಠ (ಹರಿದ್ವಾರ) ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಶ್ರೀ ಕೃಷ್ಣ ಮಂಡಲೋತ್ಸವದ ಪ್ರಯುಕ್ತ ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ -2025ರ ವಯೋಮಿತಿ 28 ರಿಂದ 35ರ 3 ವಿಭಾಗದಲ್ಲಿ ಸಂದೀಪ್ ಪೂಜಾರಿ ತ್ರಾಸಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಅವರು ತ್ರಾಸಿ ಗ್ರಾಮ ಪಂಚಾಯತ್ ಉದ್ಯೋಗಿಯಾಗಿದ್ದಾರೆ.

