Kundapra.com ಕುಂದಾಪ್ರ ಡಾಟ್ ಕಾಂ

ಬಿಜೂರಿನಲ್ಲಿ ಶ್ರೀ ದುರ್ಗಾಪರಮೇಶ್ವರಿ ಆಟೋ, ಕಾರು, ಗೂಡ್ಸ್ ಚಾಲಕರ ಸಂಘದ 79ನೇ ಸ್ವಾತಂತ್ರ್ಯ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಬಿಜೂರು ಶ್ರೀ ದುರ್ಗಾಪರಮೇಶ್ವರಿ ಆಟೋ, ಕಾರು, ಗೂಡ್ಸ್ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಅಧಿಕಾರಿಯಾದ ವಿಜಯ್ ಕುಮಾರ್ ಬೆಸ್ಕೂರ್ ಅವರು ಧ್ವಜಾರೋಹಣ ನೆರವೇರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಪ್ರತಿವರ್ಷದಂತೆ ಈ ಬಾರಿ ಕೂಡ ಮೀನಾಕ್ಷಿ ವಿಜಯಕುಮಾರ್ ಬೆಸ್ಕೂರ್ ಅವರು ರಥಬೀದಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿ ಸಾಮಾಜಿಕ ಜವಾಬ್ದಾರಿಯ ಮನೋಭಾವವನ್ನು ತೋರಿಸಿದರು.

ವೇದಿಕೆಯಲ್ಲಿ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರ್, ಕಮಲೇಶ್ ಬೆಸ್ಕೂರ್, ಸಂಘದ ಅಧ್ಯಕ್ಷ ಯೋಗೀಶ್ ದೇವಾಡಿಗ, ಕಾರ್ಯದರ್ಶಿ ರಾಧಾಕೃಷ್ಣ, ಜೇಸಿ ಪುರುಷೋತ್ತಮ ದಾಸ್, ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ್ ದೇವಾಡಿಗ, ಗಂಗಾಧರ್ ದೇವಾಡಿಗ, ಅಶೋಕ್ ಪೂಜಾರಿ, ರವೀಂದ್ರ ಪ್ರಭು, ಜಯದುರ್ಗಾ ಕೆಟರರ್ಸ್ ಮಾಲಕರಾದ ಅಶೋಕ್ ಪೂಜಾರಿ, ಹಿರಿಯ ನಾಗರಿಕರಾದ ಪಾಂಡುರಂಗ ಖಾರ್ವಿ, ದುರ್ಗಯ್ಯ ಪೂಜಾರಿ, ಸಂಘದ ಸರ್ವ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಗೌರವಾಧ್ಯಕ್ಷರಾದ ಶೇಖರ್ ಪೂಜಾರಿ ಅವರು ಉಪಹಾರದ ವ್ಯವಸ್ಥೆ ಮಾಡಿದರು. ಕಾರ್ಯಕ್ರಮವನ್ನು ಭಾಸ್ಕರ ದೇವಾಡಿಗ ಸ್ವಾಗತಿಸಿ, ನಿರೂಪಿಸಿದರು. ಅಂತಿಮವಾಗಿ ಗಣೇಶ್ ದೇವಾಡಿಗ ವಂದನಾರ್ಪಣೆ ಸಲ್ಲಿಸಿದರು.

Exit mobile version