ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಿಐಎಸ್ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಚಿಕ್ಕಬಳ್ಳಾಪುರದ ಶಾಂತಾ ವಿದ್ಯಾನಿಕೇತನ ಶಾಲೆಯಲ್ಲಿ ಪ್ರಾದೇಶಿಕ ಮಟ್ಟದ ಕಬಡ್ಡಿ ಸ್ಪರ್ಧೆಗಳನ್ನು ನಡೆಸಲಾಗಿತ್ತು.
ಸ್ಪರ್ಧೆಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, 14 ವರ್ಷ ವಯೋಮಿತಿಯ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳಾದ ವೇದಿತ್, ಅರುಣ, ಮಾಣಿಕ್ಯ ಮತ್ತು ದೀಕ್ಷಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವರ್ಷ ವಯೋಮಿತಿಯ ಸ್ಪರ್ಧೆಗಳಲ್ಲಿ ವಿದ್ಯಾರ್ಥಿನಿಯರಾದ ವಿಜಯಲಕ್ಷ್ಮೀ, ಭವ್ಯಶ್ರೀ, ತನಿಷ್ಕಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಮತ್ತು ಶಾಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಹುರಿದುಂಬಿಸಿದರು.