ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪಂಚಾಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ಲಯನ್ಸ್ ಕುಂದಾಪುರ ಸಿಟಿ ಸೆಂಟರ್ ಕುಂದಾಪುರ, ರೋಟರಿ ಮಿಡ್ ಟೌನ್ ಕುಂದಾಪುರ, ಶೌರ್ಯ ವಿಪತ್ತು ನಿರ್ವಹಣೆ ಘಟಕ ತಲ್ಲೂರು, ಕೆ.ಎಮ್.ಸಿ. ರಕ್ತ ನಿಧಿ ಮಣಿಪಾಲ ಸಹಭಾಗಿತ್ವದಲ್ಲಿ ತಲ್ಲೂರಿನಲ್ಲಿ ಬೃಹತ್ ರಕ್ತದಾನ ಶಿಬಿರ ಇತ್ತೀಚಿಗೆ ನಡೆಯಿತು.
ಸೌಕೂರು ದುರ್ಗಾ ಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಕಿಶನ್ ಹೆಗ್ಡೆ ಉದ್ಘಾಟನೆ ನರವೇರಿಸಿ, ಮಾತನಾಡಿ, ರಕ್ತದ ಅನಿವಾರ್ಯತೆ ನಿಗಿಸುವಲ್ಲಿ ರಕ್ತದಾನಕ್ಕೆ ಯುವಕರು ಮುಂದಾಗಬೇಕೆಂದು ಎಂದು ಕರೆ ನೀಡಿದರು.

ಸಂತೋಷ್ ಕುಮಾರ್ ಶೆಟ್ಟಿ ಹಕ್ಲಾಡಿ ಅವರು ಸಭೆಯ ಅಧ್ಯಕ್ಷತೆಯನ್ನು, ವಹಿಸಿದ್ದರು.
ಮುಖ್ಯಅತಿಥಿಗಳಾಗಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಜಯಕುಮಾರ್ ಗಾಣಿಗ, ಸುಕುಮಾರಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷ ಗಿರೀಶ್ ನಾಯಕ್, ಆನಂದ ಬಿಲ್ಲವ ಉಪ್ಪಿನಕುದ್ರು, ಅಭಯಹಸ್ತ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣಿಪಾಲ, ತಾಲೂಕು ಯುವ ಜನ ಸೇವೆ ಮತ್ತು ಕ್ರೀಡಾ ಧಿಕಾರಿ ಕುಸುಮಾಕರ ಶೆಟ್ಟಿ, ಡಾ. ನಿಕಿತಾ ಕೆಎಂಸಿ ಮಣಿಪಾಲ, ವಾಸುದೇವ ಕಾಮತ್ ಕಂಡ್ಲೂರು ಕರಣ್ ಪೂಜಾರಿ ತಲ್ಲೂರ್, ಅರುಣ್ ಕುಮಾರ್ ಉಪ್ಪಿನಕುದ್ರು, ಕಾರ್ಯಕ್ರಮ ಸಂಯೋಜಕ ಅಭಯಹಸ್ತ ಪ್ರಶಾಂತ್ ತಲ್ಲೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿಮಿತ್ತ ಅಭಿಜಿತ್ ಕೊಠಾರಿ ಮೂಡ್ಲಕಟ್ಟೆ ಮತ್ತು ರಮೇಶ್ ಪೂಜಾರಿ ತಲ್ಲೂರು ಇವರ ಸಾಮಾಜಿಕ ಸೇವೆಗೆ ಅಭಿನಂದಿಸಲಾಯತು.
ಭಾಸ್ಕರ್ ಆಚಾರ್ಯ ಉಪ್ಪಿನಕುದ್ರು ಸ್ವಾಗತಿಸಿ, ಚಂದ್ರಿಕಾ ಕುಂದಾಪುರ ನಿರೂಪಿಸಿ, ವಂದಿಸಿದರು. ಒಟ್ಟು 172 ಯೂನಿಟ್ ರಕ್ತ ಸಂಗ್ರಹಿಸಲಾಯಿತು.