Kundapra.com ಕುಂದಾಪ್ರ ಡಾಟ್ ಕಾಂ

ಕಬ್ಬಡಿ ಪಂದ್ಯಾಟದಲ್ಲಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಸತತ 2ನೇ ಭಾರಿಗೆ ಸಮಗ್ರ ಚಾಂಪಿಯನ್ಸ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಉಡುಪಿ ಯಡಾಡಿ ಮತ್ಯಾಡಿಯಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ತಂಡದ ವಿದ್ಯಾರ್ಥಿಗಳಾದ ನಿಹಾಲ್, ಸಾಯಿಮ್ (ಉತ್ತಮ ದಾಳಿಗಾರ) ಓಂಕಾರ್, ಯೂನಸ್, ಶಶಾಂಕ್, ಸಾಗರ್ (ಉತ್ತಮ ಹಿಡಿತಗಾರ) ಅಯಾನ್, ಹಾಗೂ ಬಾಲಕಿಯರ ತಂಡದ ನವ್ಯ (ಉತ್ತಮ ದಾಳಿಗಾರ್ತಿ), ರಕ್ಷಾ,ಸಿಂಚನ, ಸಂಜನಾ, ಅನುಷಾ, ಮೋನಿಷಾ (ಉತ್ತಮ ಹಿಡಿತಗಾರ್ತಿ)ಶ್ರಾವ್ಯ ಕ್ರೀಡಾ ಸ್ಫೂರ್ತಿಯಿಂದ ಆಟವಾಡಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version