Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂಜಿನಿಯರ್ಸ್ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂಜಿನಿಯರ್ಸ್ ದಿನಾಚರಣೆ ನಡೆಸಲಾಯಿತು.

ಕಾಲೇಜಿನ ಅಧ್ಯಕ್ಷರಾದ ಸಿದ್ದಾರ್ಥ ಜೆ. ಶೆಟ್ಟಿ ಅವರು ವಿಶ್ವೇಶ್ವರಯ್ಯ ಅವರ ಮೂರ್ತಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಎಲ್ಲರಿಗೂ ಶುಭ ಹಾರೈಸಿದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಮೆಲ್ವಿನ್ ಡಿ. ಸೋಜಾ ಅವರು ವಿಶ್ವೇಶ್ವರಯ್ಯ ಅವರ ಜೀವನ ಶೈಲಿಯನ್ನು ನಾವೆಲ್ಲರು ಅಳವಡಿಸಿಕೊಂಡು ತಾಂತ್ರಿಕ ಜ್ಞಾನದ ಜೊತೆಗೆ ಉತ್ತಮ ಮಾನವರಾಗಬೇಕು ಎಂದು ಹೇಳಿದರು.

ಕಾಲೇಜಿನ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಹಾಗೂ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ವಿಶ್ವೇಶ್ವರಯ್ಯ ಅವರು ನಡೆದು ಬಂದ ಹಾದಿ ನಮಗೆಲ್ಲ ಮಾದರಿ, ಅವರಂತೆ ಕ್ರಿಯಾತ್ಮಕವಾಗಿ ಯೋಚಿಸಿ ಸಾಧನೆಗೈಯಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇಂಜಿನಿಯರ್ಸ್ ದಿನಾಚರಣೆ ಪ್ರಯುಕ್ತ ನಡೆಸಿದ ಭಾರತದ ಎಂಜಿನಿಯರಿಂಗ್ ಅದ್ಭುತಗಳು ವಿಷಯದ ಮೇಲೆ ನಡೆದ ಸ್ಪರ್ದಾ ವಿಜೇತರಿಗೆ ನಗದು ಬಹುಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಾದ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಆಯೋಜಕರಾದ ಡಾಟಾಸೈನ್ಸ್ ವಿಭಾಗದ ಮುಖ್ಯಸ್ಥ ಕಾರ್ತಿಕೇಯನ್ ಕಾರ್ಯಕ್ರಮ ನಿರೂಪಿಸಿ, ವಿಧ್ಯಾರ್ಥಿನಿ ಶ್ರೇಯ ಉಪಾಧ್ಯಾಯ ಸ್ವಾಗತಿಸಿ, ದರ್ಶನ್ ವಂದಿಸಿದರು.

Exit mobile version