Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ನಿಧಿ ನಾಪತ್ತೆ

ಬೈಂದೂರು: ಕಾಲೇಜಿಗೆಂದು ತೆರಳಿದ ಯುವತಿಯೋರ್ವಳು ಮನೆಗೆ ಹಿಂತಿರುಗಿ ಬಾರದೇ ನಾಪತ್ತೆಯಾದ ಪ್ರಕರಣ ಬೆಳಕಿಗೆ ಬಂದಿದೆ. ಬೈಂದೂರು ನಿವಾಸಿ, ಕೋಟಾದ ಆಶ್ರೀತಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ನಿಧಿ (21) ನಾಪತ್ತೆಯಾದ ಯುವತಿ.

ಮೈಸೂರು ಮೂಲದವಳಾದ ನಿಧಿ, ಬೈಂದೂರಿನ ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದು, ಕೋಟಾದ ಕಾಲೇಜಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಸೋಮವಾರ ಎಂದಿನಂತೆ ಕಾಲೇಜಿಗೆ ಹೋಗಿದ್ದವಳು ಹಿಂತಿರುಗಿ ಮನೆಗೆ ಬಂದಿರಲಿಲ್ಲ. ತಕ್ಷಣ ಸಂಭಂಧಿಕರ ಮನೆಗಳಲ್ಲಿ ವಿಚಾರಿಸಿದಾಗ ಅಲ್ಲಿಗೂ ಹೋಗದಿರುವ ಮಾಹಿತಿ ತಿಳಿಯುತ್ತಿದ್ದಂತೆ ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಪ್ರಯೋಜನವಾಗಲಿಲ್ಲ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ತುಸು ಎಣ್ಣೆಗಪ್ಪು ಮೈಬಣ್ಣದ ಈಕೆ ನೀಲಿ ಬಣ್ಣದ ಚೂಡಿದಾರ ಧರಿಸಿದ್ದಾರೆ. ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುವ ಇವರನ್ನು ಯಾರಾದರೂ ಗುರುತಿಸಿದರು ಬೈಂದೂರು ಠಾಣೆಗೆ ಮಾಹಿತಿ ನೀಡುವಂತೆ (08254 251033) ಠಾಣಾಧಿಕಾರಿ ಸಂತೋಷ್ ಆನಂದ್ ಕಾಯ್ಕಿಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version