ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗ ವತಿಯಿಂದ ರೆಸ್ಟ್ ಕೊಡರ್ ಅಕಾಡೆಮಿಯ ಸಹಯೋಗದಲ್ಲಿ “ಎಂ.ಇ.ಆರ್.ಎನ್. ಸ್ಟಾಕ್ ” ವಿಷಯದ ಬಗ್ಗೆ ಎರಡು ದಿನದ ಕಾರ್ಯಾಗಾರ ಜರುಗಿತು.
ಸಂಪನ್ಮೂಲ ವ್ಯಕ್ತಿಯಾಗಿ ರೆಸ್ಟ್ ಕೊಡರ್ ಅಕಾಡೆಮಿ, ಸೀನಿಯರ್ ಸಾಫ್ಟ್ ವೇರ್ ಡೆವೆಲಪರ್ ಸಯ್ಯದ್ ಇಮ್ರಾನ್ ಆಗಮಿಸಿದ್ದರು.

ಸಂಸ್ಥೆಯ ಅಧ್ಯಕ್ಷರಾದ ಸಿದ್ದಾರ್ಥ ಜೆ. ಶೆಟ್ಟಿ , ಪ್ರಾಚಾರ್ಯರಾದ ಡಾ. ರಾಮಕೃಷ್ಣ ಹೆಗಡೆ, ವಿಭಾಗದ ಮುಖ್ಯಸ್ಥರಾದ ಮುರಳೀಧರ ಬಿ.ಕೆ., ಕಾರ್ಯಕ್ರಮದ ಸಂಚಾಲಕರಾದ ಡಾ. ಮಂಜುನಾಥ ಲಮಾಣಿ, ಪ್ಲೇಸ್ಮೆಂಟ್ ಡೀನ್ ಡಾ. ಅಣ್ಣಾಮಲೈ ಹಾಗು ಪ್ಲೇಸ್ಮೆಂಟ್ ಆಫೀಸರ್ ಪ್ರಸಾದ್ ಸಮ್ಮುಖದಲ್ಲಿ ಎಂಐಟಿಕೆ ರೆಸ್ಟ್ ಕೊಡರ್ ಅಕಾಡೆಮಿಯ ಜೊತೆಗೆ ಒಡಂಬಡಿಕೆ ಮಾಡಿಕೊಂಡಿತು.