Site icon Kundapra.com ಕುಂದಾಪ್ರ ಡಾಟ್ ಕಾಂ

ಎಂಐಟಿ ಕೆ ಮತ್ತು ಕಾಕುಂಜೆ ಸಾಫ್ಟವೇರ್ ನಡುವೆ ಒಪ್ಪಂದ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಎಂಐಟಿಕೆಯ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಇಂಜಿನಿಯರಿಂಗ್ ವಿಭಾಗ, ವಿದ್ಯಾರ್ಥಿಗಳನ್ನು ಕೈಗಾರಿಕಾ ಕ್ಷೇತ್ರಕ್ಕೆ ಸಿದ್ಧಗೊಳಿಸಲು, ಕಾಕುಂಜೆ ಸಾಫ್ಟವೇರ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಕಂಪನಿಯೊಂದಿಗೆ ಒಪ್ಪಂದಕ್ಕೆ ಸಹಿ ಮಾಡಿತು .

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿದ್ಧಾರ್ಥ ಜೆ ಶೆಟ್ಟಿ,  ಕಾಕುಂಜೆ ಸಾಫ್ಟವೇರ್ ಸಿಇಒ ಡಾ. ಜಿ ಕೆ ಭಟ್,  ಐ ಎಂ ಜೆ ಸಂಸ್ಥೆಗಳ ಅಕಾಡೆಮಿಕ್ಸ್ ನಿರ್ದೇಶಕ ಡಾ. ಎಸ್.ಎನ್. ಭಟ್, ಪ್ರಿನ್ಸಿಪಲ್ ಡಾ. ರಾಮಕೃಷ್ಣ ಹೆಗ್ಗಡೆ, ಇಸಿಇ ವಿಭಾಗದ ಮುಖ್ಯಸ್ಥ ಡಾ. ವರುಣ್ ಕುಮಾರ್, ಹಾಗೂ  ವಿಭಾಗದ ಪ್ರಾಧ್ಯಾಪಕರು ಹಾಜರಿದ್ದರು.

ಕಾಕುಂಜೆ ಸಾಫ್ಟವೇರ್ ಪ್ರೈವೇಟ್ ಲಿಮಿಟೆಡ್ ಮಂಗಳೂರು, ಕರ್ನಾಟಕದ ಪ್ರಮುಖ ಐಟಿ ಸಂಸ್ಥೆಯಾಗಿದ್ದು, ಐಟಿ ಕನ್ಸಲ್ಟಿಂಗ್, ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಉತ್ಪನ್ನಗಳ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದೆ. ಸಂಸ್ಥೆಯು ಎಂಟರ್‌ಪ್ರೈಸ್ ಸಾಫ್ಟ್‌ವೇರ್, ಸ್ಥಿರ ಮತ್ತು ಚರ ವೆಬ್‌ಸೈಟ್‌ಗಳು, ಮೊಬೈಲ್ ಅಪ್ಲಿಕೇಶನ್‌ಗಳು, ಇ-ಕಾಮರ್ಸ್ ಪರಿಹಾರಗಳು, ಮತ್ತು ಈ ಆರ್ಪಿ ವ್ಯವಸ್ಥೆಗಳನ್ನು ವಿನ್ಯಾಸಗೊಳಿಸುತ್ತದೆ.

ಪ್ರತಿಭಾವಂತ ತಂತ್ರಜ್ಞಾನ ಪರಿಣಿತರ ತಂಡದ ಸಹಯೋಗದೊಂದಿಗೆ, ಕಾಕುಂಜೆ ಸಾಫ್ಟವೇರ್ ನವೀನ ಮತ್ತು ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಹಾರಗಳನ್ನು ಒದಗಿಸುತ್ತಿದ್ದು, ಕೈಗಾರಿಕೆಗಳಿಗೆ ತಮ್ಮ ವ್ಯವಹಾರ ಉದ್ದೇಶಗಳನ್ನು ಸಾಧಿಸಲು ಸಹಾಯ ಮಾಡುವುದರ ಜೊತೆಗೆ ತಂತ್ರಜ್ಞಾನ ವಿಕಾಸ ಮತ್ತು ನವೋದ್ಯಮವನ್ನು ಉತ್ತೇಜಿಸುತ್ತದೆ.

Exit mobile version