Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ಬೆಳ್ಳಂಬೆಳಗೆ ಕವಿಗೋಷ್ಠಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಕೋಟ, ಉಸಿರು ಕೋಟ ಸಹಕಾರದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ರಾಜ್ಯೋತ್ಸವದ ಅಂಗವಾಗಿ ಬೆಳ್ಳಂಬೆಳಗೆ ಕವಿಗೋಷ್ಠಿ ಇತ್ತೀಚೆಗೆ ನಡೆಯಿತು.

ಸಾಂಸ್ಕೃತಿಕ ಚಿಂತಕರಾದ ಡಾ| ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಒಬ್ಬ ಕವಿಯಾದವನು ಗುಣಗ್ರಾಹಿಯಾಗಿರಬೇಕು. ತನ್ನ ಸುತ್ತಮುತ್ತಲಿನ ಪರಿಸರವನ್ನು ಸೂಕ್ಷ್ಮವಾಗಿ ಅವಲೋಕನ ಮಾಡಿರಬೇಕು. ಜೊತೆಗೆ ಇತರ ಕವಿಗಳ ಕವಿತೆಗಳನ್ನು ಆಳವಾಗಿ ಅಧ್ಯಯನ ಮಾಡಿದಾಗ ಒಂದು ಪರಿಪಕ್ವವಾದಂತಹ ಕೃತಿ ಮೂಡಬಲ್ಲದು. ಆ ದಿಸೆಯಲ್ಲಿ ಎಲ್ಲ ಕವಿಗಳು ಜಾಗೃತರಾಗಬೇಕು ಎಂದು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ ಕುಂದರ್ ಬಾರಿಕೆರೆ ಮಾತನಾಡಿ, ಇದೊಂದು ಅಪೂರ್ವವಾದ ಕಾರ್ಯಕ್ರಮ. ಬೆಳಿಗ್ಗೆ 6 ಗಂಟೆಗೆ ಕವಿಗೋಷ್ಠಿ ನಡೆಯುತ್ತಿರುವುದು ಇದೇ ಮೊದಲ ಬಾರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ, ಪ್ರಾಸ್ತಾವಿಕ ಮಾತನ್ನಾಡಿದರು. ಸತೀಶ್ ವಡ್ಡರ್ಸೆ ಕಾರ್ಯಕ್ರಮವನ್ನು ನಿರೂಪಿಸಿದರು. ಚೇಂಪಿ ದಿನೇಶ್ ಆಚಾರ್ಯ, ರವೀಂದ್ರ ಶೆಟ್ಟಿ ಕಾರ್ಯಕ್ರಮವನ್ನು ಸಂಘಟಿಸಿದರು.

ಬಳಿಕ ಕವಿಗಳಾದ ಅಲ್ತಾರು ನಾಗರಾಜ್, ಅಶೋಕ್ ತೆಕ್ಕಟ್ಟೆ, ಲಿಖಿತ ಶೆಟ್ಟಿ ಬೂದಾಡಿ, ಮಂಜುನಾಥ ಗುಂಡ್ಮಿ, ಮಂಜುನಾಥ ಮರವಂತೆ, ಮಂಜುನಾಥ ಕಾರ್ತಟ್ಟು, ವಾಣಿಶ್ರೀ ಅಶೋಕ ಐತಾಳ್, ನಾಗೇಂದ್ರ ಆಚಾರ್ ಚಿತ್ರಪಾಡಿ, ರವಿಕಿರಣ್ ಕೋಟ, ಆಶಾ ನೇರಳಕಟ್ಟೆ, ಕೆ.ಜಿ. ಸೂರ್ಯನಾರಾಯಣ ಚಿತ್ರಪಾಡಿ, ಕುಸುಮಾವತಿ ಸಿ. ಶೆಟ್ಟಿ ನೇರಳಕಟ್ಟೆ, ಸುಪ್ರೀತಾ ಪುರಾಣಿಕ್, ತನುಜಾ ಎನ್. ಕೋಟೇಶ್ವರ, ಕಾ. ಶಾಂಭವಿ ರಂಜಿತ್ ಕಮಲಶಿಲೆ, ಮೊದಲಾದವರು ತಮ್ಮ ಕವನವನ್ನು ವಾಚಿಸಿದರು. ಕಾರ್ಯಕ್ರಮಕ್ಕೆ  ರವೀಂದ್ರ ಶೆಟ್ಟಿ ಮತ್ತು ಅನಂತಕೃಷ್ಣ ಐತಾಳ್ ಸಹಕರಿಸಿದರು.

Exit mobile version