ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ವಿಕಲಚೇತನ ವಿದ್ಯಾರ್ಥಿಗಳ ಕ್ರೀಡಾಕೂಟವು ಹೆಮ್ಮಾಡಿಯಲ್ಲಿ ನಡೆಯಿತು.
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಒಂಬತ್ತನೆಯ ತರಗತಿಯ ವಿದ್ಯಾರ್ಥಿ ರೆಹಮತುಲ್ಲ 17 ರ ವಯೋಮಾನದ ಬಾಲಕರ 100ಮೀಟರ್ ಓಟ ಹಾಗೂ ಉದ್ದಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನದೊಂದಿಗೆ ಎರಡು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಪಡೆದು ಹಾಸನದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿರುತ್ತಾನೆ.
ವಿಜೇತ ವಿದ್ಯಾರ್ಥಿಯ ಸಾಧನೆಯನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಮೊಗವೀರ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ಅವರು ಪ್ರಶಂಶಿಸಿದ್ದಾರೆ. ಹಾಗೆಯೇ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

