ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಗುರು ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸೆಂಟರ್ ಪುಣೆ, ಮಹಾರಾಷ್ಟ್ರ ಇದರ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಪರೀಕ್ಷೆಯಲ್ಲಿ ಇಲ್ಲಿನ ಮದರ್ ತೆರೇಸಾ ಶಾಲೆಯ 7ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಯಾದ ಸುಹಾಸ್ ವಿ. ಭಟ್ ಅವರಿಗೆ ಬೆಳ್ಳಿಯ ಪದಕ ಲಭಿಸಿದೆ. ಹಾಗೆಯೇ 7ನೇ ತರಗತಿಯ ಸೃಜನ್ ಅವರಿಗೆ ಕಂಚಿನ ಪದಕ ದೊರಕಿದೆ.
ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿ ಉಜ್ವಲ ಭವಿಷ್ಯ ಹಾರೈಸಿದ್ದಾರೆ.

