Site icon Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರೀಯ ಅಬಾಕಸ್ & ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆ: ನಮಸ್ಯಾ ಸುರೇಶ್‌‌ಗೆ ಪ್ರಥಮ ರನ್ನರ್-ಅಪ್ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಜನವರಿ 25ರಂದು ಪುದಿಚೆರಿಯಲ್ಲಿ ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 21ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯ ಜೆಡ್.ಆರ್.ಎಲ್ ಕೆಟಗರಿಯಲ್ಲಿ ನಮಸ್ಯಾ ಸುರೇಶ್ ಪ್ರಥಮ ರನ್ನರ್-ಅಪ್ ಪ್ರಶಸ್ತಿ ಪಡೆದರು.

ರಾಷ್ಟ್ರದ ವಿವಿಧ ಭಾಗಗಳಿಂದ 2200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಮಸ್ಯಾಗೆ ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಾ ಕುಂದಾಪುರ ಕೇಂದ್ರದ ಮುಖ್ಯಸ್ಥ ಪ್ರಸನ್ನ ಕೆ.ಬಿ, ಬೋಧಕರಾದ ಮಹಾಲಕ್ಷ್ಮಿ ಮತ್ತು ದೀಪಾ ತರಬೇತಿ ನೀಡಿರುತ್ತಾರೆ.

ಭಟ್ಕಳದ ಸುರೇಶ್ ಕುಮಾರ್ ನಾಯ್ಕ ಮತ್ತು ಸುಮಲತಾ ಸುರೇಶ್ ಅವರು ಪುತ್ರಿಯಾದ ನಮಸ್ಯಾ ಕುಂದಾಪುರದ ಓಕ್ ವುಡ್ ಇಂಡಿಯನ್ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದಾರೆ.

Exit mobile version