Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟ ಶ್ರೀ ಹಿರೇಮಹಾಲಿಂಗೇಶ್ವರ ಮಿತ್ರವೃಂದ ಸುವರ್ಣ ಸಂಭ್ರಮ, ಸ್ಥಳೀಯರಿಗೆ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇವಸ್ಥಾನ ಕೋಟ ಇದರ ವಾರ್ಷಿಕ ರಥೋತ್ಸವದ ಅಂಗವಾಗಿ ಶ್ರೀ ಹಿರೇಮಹಾಲಿಂಗೇಶ್ವರ ಮಿತ್ರವೃಂದ ಕೋಟ ಇವರ ಸುವರ್ಣ ಮಹೋತ್ಸವದ ಹಿನ್ನಲ್ಲೆಯಲ್ಲಿ ಹಮ್ಮಿಕೊಂಡ ಏಳು ದಿನಗಳ ಸಾಂಸ್ಕೃತಿಕ ಪರ್ವ ಕಾರ್ಯಕ್ರಮದ 5ನೇ ದಿನದ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮವು ಗೀತಾನಂದ ವೇದಿಕೆಯಲ್ಲಿ ಜರಗಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ವಹಿಸಿ ಮಾತನಾಡಿ, ಅರ್ಧ ಶತಮಾನಕ್ಕೂ ಹೆಚ್ಚು ಕಾಲ ನಿರಂತರವಾಗಿ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಸೇವೆ ಸಲ್ಲಿಸಿರುವ ಹಿರೇಮಹಾಲಿಂಗೇಶ್ವರ ಮಿತ್ರವೃಂದದ ಸಾಧನೆ ನಿಜಕ್ಕೂ ಸಾರ್ಥಕವಾದದ್ದು ಎಂದು ಶ್ಲಾಘಿಸಿ ಇಂತಹ ಸುವರ್ಣ ಕ್ಷಣಗಳನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದರಲ್ಲದೆ ಹಿಂದೆ ರಥೋತ್ಸವವು ಕೆಲವೇ ದಿನಗಳಿಗೆ ಸೀಮಿತವಾಗಿದ್ದರೆ, ಮಿತ್ರವೃಂದ ಸ್ಥಾಪನೆಯ ನಂತರ ವಿಭಿನ್ನ ಹಾಗೂ ಅರ್ಥಪೂರ್ಣ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಊರಿಗೆ ಹೆಮ್ಮೆಪಡುವಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಿರುವುದು ಶ್ಲಾಘನೀಸಿದ ಅವರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭ ಇತಿಹಾಸ ಪ್ರಸಿದ್ಧ ಹಿರೇಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಅಪಾರ ಕಾಳಜಿ ವಹಿಸಿದ್ದಾರೆ ಎಂದು ಹೇಳಿದರು.

50ನೇ ಸುವರ್ಣ ಸಂಭ್ರಮದ ಅಂಗವಾಗಿ ಮಿತ್ರವೃಂದದ  ಸಹಕಾರ ನೀಡಿದ ಹದಿನೈದು ಮಂದಿ ಸ್ಥಳೀಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್, ಕೋಟ ಸಿ.ಎ. ಬ್ಯಾಂಕ್ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ, ನಿವೃತ್ತ ಮುಖ್ಯಶಿಕ್ಷಕ ಕೆ. ರಾಜಾರಾಮ್ ಐತಾಳ್, ಕುಂದಾಪುರ ಆಯುಷ್ ವೈದ್ಯಾಧಿಕಾರಿ ಡಾ. ಅಶೋಕ ಎಚ್., ಕೋಟ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಸದಾನಂದ ಜಿ., ದೇವಿಕಿರಣ ಕಾಂಪ್ಲೆಕ್ಸ್ ಮಾಲಕ ಶ್ರೀಕಾಂತ ಶೆಣೈ, ಹೋಟೆಲ್ ಉದ್ಯಮಿ  ವೆಂಕಟೇಶ ಪ್ರಭು,  ಹಿರೇಮಹಾಲಿಂಗೇಶ್ವರ ಮಿತ್ರವೃಂದದ ಕಾರ್ಯದರ್ಶಿ ಜಿ.ಎಸ್ ಆನಂದ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಸಾದ್ ಬಿಲ್ಲವ ಸ್ವಾಗತಿಸಿ, ಚಂದ್ರ ಆಚಾರ್ ಕೋಟ ನಿರೂಪಿಸಿ, ರಂಜಿತ್ ಕುಮಾರ್ ಬಾರಿಕೆರೆ ವಂದಿಸಿದರು.

ಸ್ಥಳೀಯ ಕಾಸನಗುಂದು ಅಂಗನವಾಡಿ ಪುಟಾಣಿಗಳಿಂದ ನೃತ್ಯ ವೈಭವ, ಚಾಪರ್ಕ ಕಲಾವಿದ ದೇವದಾಸ ಕಾಪಿಕಾಡ್ ಮಂಗಳೂರು ತಂಡದಿಂದ ನಾಟಕ ನನ್ನ ಕಥೆ ಪ್ರದರ್ಶನಗೊಂಡಿತು.

Exit mobile version