Site icon Kundapra.com ಕುಂದಾಪ್ರ ಡಾಟ್ ಕಾಂ

ಯಕ್ಷಕಲಾವಿದ ಗೋಪಾಲ ಆಚಾರ್‌ಗೆ ಯಕ್ಷರತ್ನ ಮೊಳಹಳ್ಳಿ ಹೆರಿಯ ನಾಯ್ಕ ಇಂಡಿಕಾ ಪುರಸ್ಕಾರ ಪ್ರದಾನ

???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಕರಾವಳಿ ಭಾಗದಲ್ಲಿ ಇಂಡಿಕಾ ಸಂಸ್ಥೆ ಜನಸಾಮಾನ್ಯರೊಂದಿಗೆ ಸ್ಪಂದಿಸುವ ಜತೆಗೆ ಸಾಂಸ್ಕೃತಿಕ ಕಲಾರಾಧನೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಇದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ಅವರು ಭಾನುವಾರ ಕೋಟದ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲಾ ಗೀತಾನಂದ ರಂಗ ಮಂದಿರದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಪಡುಕರೆ ಇದರ 16ನೇ ವರ್ಷದ ಇಂಡಿಕಾ ಸಂಭ್ರಮ-2026 ಯಕ್ಷರತ್ನ ಮೊಳಹಳ್ಳಿ ಹೆರಿಯ ನಾಯ್ಕ ಇಂಡಿಕಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂತೋಷ್ ಮೇಷ್ಟ್ರು  ಇಂಡಿಕಾ ಸಂಸ್ಥೆ ಹುಟ್ಟುಹಾಕಿದ ಸದಾ ಸಮಾಜದ ಬಗ್ಗೆ ತುಡಿತ ಹೊಂದಿದ್ದರು. ಅವರ ಅಕಾಲಿಕ ನಿಧನದ ನಂತರವು ಮುಂದುವೆರೆಸಿ ಅವರ ನೆನಪನ್ನು ಸದಾ ಕಾಲ ಉಳಿಯುವಂತೆ ಮಾಡಿರುವುದು ಅವರಿಗೆ ದೊಡ್ಡ ಗೌರವ ಸಲ್ಲಿಸಿದಂತೆ ಅಂತಯೇ ತೀರ್ಥಹಳ್ಳಿ ಗೋಪಾಲ್ ಆಚಾರ್ ಎನ್ನುವ ಹಿರಿಯಯಕ್ಷಕಲಾವಿದರನ್ನು ಗುರುತಿಸಿ ಪುರಸ್ಕಾರ ನೀಡಿದ್ದು ಅತ್ಯಂತ ಪ್ರಶಂಸನೀಯ ಕಾರ್ಯವಾಗಿದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ಇಂಡಿಕಾ ಕಲಾ ಬಳಗದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ವಹಿಸಿದ್ದರು. ಇದೇ ವೇಳೆ ಯಕ್ಷರತ್ನ ಹೆರಿಯ ನಾಯ್ಕ ಇಂಡಿಕಾ ಪುರಸ್ಕಾರವನ್ನು ಹಿರಿಯ ಯಕ್ಷಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ ಅವರಿಗೆ ಗಣ್ಯರು ಪ್ರದಾನಿಸಿದರು.

ವಿಶೇಷ ಅಭಿನಂದನೆಯ ಭಾಗವಾಗಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಕಲಾವಿದ ಕೋಟ ಸುರೇಶ್ ಬಂಗೇರ,ಮಕ್ಕಳ ತಜ್ಞ ಡಾ. ಸುಧಾಕರ್ ಹಂದೆ,ಸಾಧಕ ವಿದ್ಯಾರ್ಥಿಗಳಾದ ಪೂರ್ವಿ ಆರ್ ಎಸ್., ಶ್ರೀನಿಧಿ ಮರಕಾಲ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಇದೇ ವೇಳೆ ಅಶಕ್ತರಿಗೆ ನೆರವು ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಕುಂದಾಪುರ ಪ್ರಸಿದ್ಧ ಮನೋವೈದ್ಯ ಡಾ. ಪ್ರಕಾಶ್ ಸಿ. ತೋಳಾರ್ ಅವರು ಆಶಯದ ನುಡಿಗಳನ್ನಾಡಿದರು. ಉದ್ಯಮಿ ಬಿಜು ನಾಯರ್ ಅಭಿನಂದನಾ ನುಡಿಗಳನ್ನಾಡಿದರು.

ಮುಖ್ಯ ಅಭ್ಯಾಗತರಾಗಿ ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ, ಹಿರಿಯ ಕೃಷಿಕ ದಾರೋಜ್ಜಿಮನೆ ಆನಂದ ಮರಕಾಲ, ಸಾಮಾಜಿಕ ಕಾರ್ಯಕರ್ತರಾದ ದಿನೇಶ್ ಗಾಣಿಗ, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಗೆಳೆಯರ ಬಳಗ ಇದರ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಇಂಡಿಕಾ ಕಲಾ ಬಳಗದ ಪ್ರಮುಖರಾದ ನಾಗರಾಜ್ ಮಣೂರು ಉಪಸ್ಥಿತರಿದ್ದರು.

ಇಂಡಿಕಾ ಬಳಗದ ಸಂಚಾಲಕ ಪ್ರಭಾಕರ್ ಪಡುಕರೆ ಸ್ವಾಗತಿಸಿದರು. ಸಂಸ್ಥೆಯ ಮಾರ್ಗದರ್ಶಕ ಟಿ. ಮಂಜುನಾಥ್ ಗಿಳಿಯಾರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರಮವನ್ನು ಬಳಗದ ಸಂತೋಷ್ ಕಾಂಚನ್ ನಿರೂಪಿಸಿದರು. ಪತ್ರಕರ್ತ ರವೀಂದ್ರ ಕೋಟ ವಂದಿಸಿದರು.ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಯಶಸ್ವಿ ಕಲಾವೃಂದ ಕೊಮೆ ಇವರಿಂದ ಗಾನ ವೈಭವ, ಸ್ಥಳೀಯ ಅಂಗನವಾಡಿ ಮಕ್ಕಳಿಂದ ನೃತ್ಯ ವೈವಿದ್ಯ, ಪಿಂಗಾರ್ ಕಲಾವಿದರು ಬೆದ್ರ ಅವರಿಂದ ಓಂಕಾರ ನಾಟಕ ಪ್ರದರ್ಶನಗೊಂಡಿತು.

Exit mobile version